Andolana originals

ಪೆರಿಫೆರಲ್ ರಿಂಗ್ ರಸ್ತೆಗೆ ಶೀಘ್ರ ಸರ್ವೆ

ಕೆ.ಬಿ.ರಮೇಶನಾಯಕ

ಎಂಡಿಎ ಕರೆದಿದ್ದ ಡಿಪಿಆರ್ ತಯಾರಿಸುವ ಟೆಂಡರ್‌ನಲ್ಲಿ ನಾಲ್ಕು ಸಂಸ್ಥೆಗಳು ಭಾಗಿ

ವಿಸ್ತೃತ ಯೋಜನಾ ವರದಿ ತಯಾರಿಸಲು ೭.೫ ಕೋಟಿ ರೂ. ಅನುದಾನ ಮೀಸಲು

ಮೈಸೂರು: ವೇಗವಾಗಿ ಬೆಳೆಯುತ್ತಿರುವ ಮೈಸೂರಿಗೆ ಮತ್ತೊಂದು ಬಾಹ್ಯ ವರ್ತುಲ ರಸ್ತೆ(ಪೆರಿಫೆರಲ್ ರಿಂಗ್ ರೋಡ್) ನಿರ್ಮಿಸಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಶೀಘ್ರದಲ್ಲೇ ಸರ್ವೆ ಕಾರ್ಯ ಶುರುವಾಗಲಿದೆ.

ಡಿಪಿಆರ್ ತಯಾರಿಕೆಗೆ ಟೆಂಡರ್ ಕರೆಯಲಾಗಿದ್ದು, ನಾಲ್ಕು ಕಂಪೆನಿಗಳು ಭಾಗಿಯಾಗಿವೆ. ಇದರಲ್ಲಿ ಎಂಡಿಎ ವಿಧಿಸಿರುವ ಷರತ್ತುಗಳನ್ನು ಪೂರೈಸಬಲ್ಲ ಒಂದು ಕಂಪೆನಿಯನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಈ ಕಂಪೆನಿಗೆ ಅನುಮೋದನೆ ನೀಡುತ್ತಿದ್ದಂತೆ ಬಹುನಿರೀಕ್ಷಿತ ಬೃಹತ್ ಯೋಜನೆಗೆ ಮತ್ತೊಮ್ಮೆ ಜೀವ ಕಳೆ ಬರಲಿದೆ. ಎಂಡಿಎ ಬಜೆಟ್‌ನಲ್ಲಿ ೭.೫ ಕೋಟಿ ರೂ. ಅನುದಾನ ಮೀಸಲಿಟ್ಟಿರುವುದರಿಂದ ಸರ್ವೆ ಕಾರ್ಯ ಐದಾರು ತಿಂಗಳಲ್ಲಿ ಮುಗಿಯುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣವಾದರೆ ಮೈಸೂರು ಸೇರಿದಂತೆ ನಂಜನಗೂಡು, ಶ್ರೀರಂಗಪಟ್ಟಣ, ಹುಣಸೂರು, ತಿ.ನರಸೀಪುರ, ಎಚ್.ಡಿ.ಕೋಟೆ ಮಾರ್ಗಗಳು, ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ.

ಹಲವು ವರ್ಷಗಳ ಕನಸು: ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ೨೦೫೦ರ ವೇಳೆಗೆ ಜನಸಂಖ್ಯೆ ೩೫ರಿಂದ ೪೦ ಲಕ್ಷಕ್ಕೆ ಹೆಚ್ಚಾಗುವ ಅಂದಾಜು ಇಟ್ಟುಕೊಂಡಿರುವ ಎಂಡಿಎ ಈ ಹಿಂದೆಯೇ ನಗರದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸುವ ಸಂಬಂಧ ೭೫೦ ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ ಮುಂದಾಗಿತ್ತು. ಆದರೆ, ಆಗ ಯೋಜನೆ ಸಂಬಂಧ ಸಮೀಕ್ಷೆಯೇ ನಡೆಯದೆ ನನೆಗುದಿಗೆ ಬಿದ್ದಿತ್ತು. ಈಗ ಯೋಜನೆ ಮತ್ತೆ ಚಾಲ್ತಿಗೆ ಬರುವ ಜೊತೆಗೆ ಡಿಪಿಆರ್ ತಯಾರಿಸಲು ಟೆಂಡರ್ ಕರೆದು ನಾಲ್ಕು ಸಂಸ್ಥೆಗಳು ಸರ್ವೇ ಕಾರ್ಯಕ್ಕಾಗಿ ಮುಂದೆ ಬಂದಿರುವುದು ಕೈಗಾರಿಕೋದ್ಯಮಿಗಳು, ರಿಯಲ್ ಎಸ್ಟೇಟ್ ವಲಯದಲ್ಲಿ ಸಂತಸ ಉಂಟುಮಾಡಿದೆ.

೨,೫೦೦ ಕೋಟಿ ರೂ. ಅಂದಾಜು: ಮುಂದಿನ ೨೦ ವರ್ಷಗಳ ನಗರದ ಬೆಳವಣಿಗೆಯನ್ನು ಗಮದಲ್ಲಿಟ್ಟುಕೊಂಡು ಒಟ್ಟು ೭೩.೨೫ ಕಿ.ಮೀ. ಉದ್ದದ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ೨,೫೦೦ ಕೋಟಿ ರೂ. ಅಂದಾಜು ಮೊತ್ತದ ಯೋಜನೆ ನಿರೀಕ್ಷೆ ಹೊಂದಲಾಗಿದೆ. ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಳೆದ ಮೂರು ವರ್ಷಗಳ ಹಿಂದೆ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ನೆರವು ನೀಡುವ ಭರವಸೆ ನೀಡಿದ್ದರು. ರಸ್ತೆ ನಿರ್ಮಾಣಕ್ಕೆ ಒಟ್ಟು ಅಂದಾಜು ೮೦೦ ಎಕರೆ ಜಾಗದ ಅವಶ್ಯಕತೆ ಇದೆ. ೨೦೧೬ರ ಸಿಡಿಪಿ ಯಲ್ಲಿಯೇ ಪೆರಿಫೆರಲ್ ರಿಂಗ್ ರೋಡ್ ಬಗ್ಗೆ ಪ್ರಸ್ತಾಪಿಸ ಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ.೫೦ರಷ್ಟು ಅನುದಾನ ನೀಡಲಿದೆ. ಆದರೆ, ಯೋಜನೆಯ ಡಿಪಿಆರ್ ತಯಾರಾದ ಮೇಲೆ ಅದರ ಸ್ಪಷ್ಟರೂಪ, ನಿಖರ ಅಂದಾಜು ಮೊತ್ತ ತಿಳಿಯಲಿದೆ ಎನ್ನುತ್ತಾರೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು.

ಕೈಗಾರಿಕೆಗಳಿಗೆ ಉತ್ತೇಜನ: ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಿದರೆ ದೊಡ್ಡ ವಾಹನಗಳೂ ಸೇರಿದಂತೆ ಎಲ್ಲ ಬಗೆಯ ವಾಹನಗಳ ಸಂಚಾರಕ್ಕೆ ಅನುಕೂಲವಾಗುತ್ತದೆ. ಹೊಸ ಬಡಾವಣೆಗಳು, ಗ್ರಾಮಗಳಿಗೂ ಸಂಪರ್ಕ ಸೌಲಭ್ಯ ಸಿಗುವುದರಿಂದ ಮುಂದೆ ಮೈಸೂರು ನಗರದಲ್ಲಿ ಸಂಚಾರ ಒತ್ತಡ ತಪ್ಪಿಸಬಹುದಾಗಿದೆ. ರಾಜ್ಯವಷ್ಟೇ ಅಲ್ಲ, ದೇಶ-ವಿದೇಶಗಳಿಂದ ಮೈಸೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಅಲ್ಲದೆ ಮೈಸೂರು ನಗರ ಮತ್ತು ಜಿಲ್ಲಾದ್ಯಂತ ಬೃಹತ್, ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳು ಆರಂಭಗೊಂಡಿರುವುದು ನಗರದಲ್ಲಿ ಜನಸಂಖ್ಯೆ ಹಾಗೂ ವಾಹನ ಸಂಖ್ಯೆ ಅಧಿಕವಾಗಲು ಪ್ರಮುಖ ಕಾರಣವಾಗಿದೆ.

ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣವಾದರೆ ಈ ಎಲ್ಲ ಸಮಸ್ಯೆಗೆ ಉತ್ತರ ಸಿಗಲಿದೆ. ಸದ್ಯ ನಗರದಲ್ಲಿನ ೪೪ ಕಿಮೀ ಉದ್ದದ ರಿಂಗ್ ರಸ್ತೆಯ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ನಗರದ ಟ್ರಾಫಿಕ್ ಒತ್ತಡಕ್ಕೆ ಮುಕ್ತಿ ಸಿಗಲಿದೆ. ಇದಲ್ಲದೆ ಹೊರವಲಯದಲ್ಲಿ ಬಡಾವಣೆಗಳನ್ನು ರಚಿಸಿರುವ ರಿಯಲ್ ಎಸ್ಟೇಟ್ ಮಾಲೀಕರಿಗೂ ಅನುಕೂಲ, ಭೂ ಸ್ವಾಽನವಾಗುವ ರೈತರ ಭೂಮಿಗೂ ಬಂಪರ್ ಬೆಲೆ ದೊರೆಯಲಿದೆ.

” ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡುವ ಸಂಬಂಧ ಸರ್ವೆ ಕಾರ್ಯಕ್ಕಾಗಿ ಕರೆಯಲಾಗಿದ್ದ ಟೆಂಡರ್‌ನಲ್ಲಿ ನಾಲ್ಕು ಕಂಪೆನಿಗಳು ಮುಂದೆ ಬಂದಿವೆ. ಮೈಸೂರಿನ ಅಭಿವೃದ್ಧಿಗೆ ಪೂರಕವಾಗಿ ಬಾಹ್ಯ ವರ್ತುಲ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಪ್ರಸ್ತುತ ಇರುವ ವರ್ತುಲ ರಸ್ತೆಯಿಂದ ೮ರಿಂದ ೧೦ ಕಿ.ಮೀ. ದೂರದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸುವ ಯೋಜನೆಗೆ ಸಮೀಕ್ಷೆ ನಡೆಸಿ ಎಷ್ಟು ಭೂಮಿ ಅಗತ್ಯವಿದೆ. ಯಾವ ಗ್ರಾಮಗಳ ಮೇಲೆ ಹಾದು ಹೋಗುತ್ತದೆ, ಪ್ರಸ್ತುತ ಇರುವ ಯಾವ ರಸ್ತೆಗಳಿಗೆ ಸಂಪರ್ಕ ಕಲ್ಪಿಸಬಹುದು, ಒಟ್ಟಾರೆ ಯೋಜನೆಗೆ ಎಷ್ಟು ಹಣ ಬೇಕಾಗುತ್ತದೆ ಎಂಬುದರ ಸಮಗ್ರ ಮಾಹಿತಿಯನ್ನೊಳಗೊಂಡ ಪ್ರಾಥಮಿಕ ವರದಿ ತಯಾರಿಸಲು ಶೀಘ್ರ ಸರ್ವೆ ಕಾರ್ಯ ಆರಂಭಿಸಲಾಗುವುದು.”

ಕೆ.ಆರ್.ರಕ್ಷಿತ್, ಆಯುಕ್ತರು, ಎಂಡಿಎ

ಆಂದೋಲನ ಡೆಸ್ಕ್

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

8 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

27 mins ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

38 mins ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

55 mins ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

1 hour ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

1 hour ago