Andolana originals

ನಂಜನಗೂಡಿನ ರಸಬಾಳೆ; ಬಂತು ಜೀವಕಳೆ

10 ಹೆಕ್ಟೇರ್‌ನಿಂದ 79.80 ಹೆಕ್ಟೇರ್‌ ಪ್ರದೇಶಕ್ಕೆ ವ್ಯಾಪಿಸಿದ ಬಾಳೆ ಬೆಳೆ

-ಚಿರಂಜೀವಿ ಸಿ.ಹುಲ್ಲಹಳ್ಳಿ

ಮೈಸೂರು: ದಶಕಗಳ ಹಿಂದೆ ಶಾಲಾ ಪಠ್ಯದಲ್ಲಿ (ನಂಜನಗೂಡಿನ ರಸಬಾಳೆ, ತಂದಿಹೆ ಕೊಡಗಿನ ಕಿತ್ತಳೆ…) ಸ್ಥಾನ ಪಡೆದಿದ್ದ ರಸಬಾಳೆ ನಂಜನಗೂಡು ತಾಲ್ಲೂಕಿನ ಪಾರಂಪರಿಕ, ಘನತೆಯ ಬೆಳೆಯಾಗಿತ್ತು. ಕಾಲ ಕ್ರಮೇಣ ಅವಸಾನದ ಅಂಚಿಗೆ ತಲುಪಿತ್ತು. ಈಗ ರಸಬಾಳೆಗೆ ಮತ್ತೆ ಮಾನ್ಯತೆ ಸಿಗುತ್ತಿದ್ದು, ಇತ್ತೀಚೆಗೆ ರಸಬಾಳೆ ಬೆಳೆಯುವ ರೈತರು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದಾರೆ. ದಶಕಗಳಿಂದಲೂ ರಸಬಾಳೆ ಬೆಳೆಯುವ ರೈತರ ಸಂಖ್ಯೆ ಕ್ಷೀಣಿಸಿ ಇನ್ನೇನು ವಿಶಿಷ್ಟ ಪಾರಂಪರಿಕ ಬೆಳೆ ಕಣ್ಮರೆಯಾಗಿ ಬಿಡುತ್ತದೆ ಎಂದುಕೊಂಡಿದ್ದ ಸಂದರ್ಭದಲ್ಲಿ ಫೀನಿಕ್ಸ್ ಹಕ್ಕಿಯಂತೆ ಎದ್ದು ಬಂದಿದೆ.

2019-20ರ ವೇಳೆಗೆ ನಂಜನಗೂಡು ತಾಲ್ಲೂಕಿನಲ್ಲಿ ಕೇವಲ 10 ಹೆಕ್ಟೇರ್ ಪ್ರದೇಶದಲ್ಲಿ15 ಮಂದಿ ರೈತರು ಮಾತ್ರ ರಸಬಾಳೆ ಬೆಳೆಯುತ್ತಿದ್ದರು. ಆದರೆ, 2024-25ನೇ ಸಾಲಿನಲ್ಲಿ 164 ರೈತರು 79.80 ಹೆಕ್ಟೇರ್ ಪ್ರದೇಶದಲ್ಲಿ ರಸಬಾಳೆ ಬೆಳೆಯುತ್ತಿದ್ದು, ಜೀವಕಳೆ ಬಂದಿದೆ.

ರಸಬಾಳೆ ಬೆಳೆಯುವ ವಾತಾವರಣವೇ ಇಲ್ಲ. ಹೀಗಾಗಿ ವಿಶ್ವ ವಿಖ್ಯಾತ ರಸಬಾಳೆ ತಳಿಯನ್ನು ಉಳಿಸುವುದು ಕಷ್ಟ ಎನ್ನುವ ಪರಿಸ್ಥಿತಿ ಸೃಷ್ಟಿಯಾಗಿತ್ತು.

ಇಂತಹ ಕಠಿಣ ಸಮಯದಲ್ಲಿ ಬೆಳೆಯನ್ನುಉತ್ತೇಜಿಸಲು ರಾಜ್ಯ ಸರ್ಕಾರ ವಿಶೇಷ ಕಾಳಜಿ ತೋರಿತು. ಇದರ  ಫಲವಾಗಿ ರಸಬಾಳೆಯು ಹಂತ ಹಂತವಾಗಿ ಸಂರಕ್ಷಣೆಯ ಪ್ರದೇಶ ವಿಸ್ತೀರ್ಣ, ಕೊಯ್ಲೋತ್ತರ ನಿರ್ವಹಣೆ ಮತ್ತು ಮಾರುಕಟ್ಟೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಿದ್ಧಗೊಂಡಿದೆ.

ದಶಕಗಳಿಂದ 10 ಎಕರೆಗೆ ಸೀಮಿತವಾಗಿದ್ದ ಬೆಳೆಯನ್ನು ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ, ಕೋಡಿನರಸೀಪುರ, ವೀರೇ ದೇವನಪುರ, ತಾಂಡವಪುರ, ಹಗಿನಾವಾಳು, ಹಳೇಪುರ, ಕೂಗಲೂರು, ಕುರಹಟ್ಟಿ, ದೇವೀ ರಮ್ಮನಹಳ್ಳಿ, ಸಿದ್ದಯ್ಯನಹುಂಡಿ, ಹೆಡತಲೆ, ಚಿನ್ನಂಬಳ್ಳಿ, ಚುಂಚನಹಳ್ಳಿ ಮತ್ತು ಮಾಡ್ರಹಳ್ಳಿ ಗ್ರಾಮಗಳ 79.80 ಹೆಕ್ಟೇರ್‌ಗಳಲ್ಲಿ ಬೆಳೆಯಲಾಗುತ್ತಿದೆ.

ತೋಟಗಾರಿಕೆ ಇಲಾಖೆ, ಇಲವಾಲದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯ, ಸುತ್ತೂರಿನ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ತಜ್ಞರನ್ನೊಳಗೊಂಡ ತಾಂತ್ರಿಕ ಸಮಿತಿಯ ಸೂಚನೆಗಳಂತೆ ತರಬೇತಿ, ಪ್ರಾತ್ಯಕ್ಷಿಕೆ ಹಾಗೂ ಪನಾಮಾ ರೋಗ ಹತೋಟಿ ಕುರಿತು ಸಲಹೆ ಮಾರ್ಗದರ್ಶನ ನೀಡಲಾಗುತ್ತಿದೆ.

ರಸಬಾಳೆ ಬೆಳೆಯುವ ಪ್ರದೇಶ ವಿಸ್ತರಣೆಯನ್ನು ಪ್ರೋತ್ಸಾಹಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿ ಅರ್ಧ ಎಕರೆಗೆ ಶೇ.90 ರಂತೆ 67,311 ಹಾಗೂ ಸಾಮಾನ್ಯ ರೈತರಿಗೆ ಶೇ.75 ರಂತೆ 56,093 ರೂ. ಸಹಾಯ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 49 ರೈತರಿಗೆ 9.08 ಹೆ.ಪ್ರದೇಶ ವಿಸ್ತರಣೆಗಾಗಿ 16.83 ಲಕ್ಷ ರೂ. ಸಹಾಯ ಧನ ನೀಡಿದ ಪರಿಣಾಮ ರಸಬಾಳೆ ಬಗ್ಗೆ ರೈತರು ಒಲವು ತೋರಿದ್ದಾರೆ.

ಮೈಸೂರು ಸಂಸ್ಥಾನದ ಕಾಲದಿಂದಲೂ ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆ, ವೀಳ್ಯದೆಲೆ ಇಲ್ಲಿನ ಜನರಲ್ಲಿ ಹಾಸು ಹೊಕ್ಕಾಗಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಅರಮನೆಗೆ ಭೇಟಿ ನೀಡುವ ಗಣ್ಯರು ಹಾಗೂ ವಿದೇಶಿ ಅತಿಥಿಗಳಿಗೆ ರಸಬಾಳೆ, ಅಂಜೂರ ಹಣ್ಣುಗಳನ್ನು ನೀಡಲಾಗುತ್ತಿತ್ತು. ಎರಡನೇ ಬಾರಿಗೆ ಅರಮನೆಗೆ ಬಂದವರು ಮರೆಯದೇ ಈ ಹಣ್ಣುಗಳನ್ನು ಕೇಳಿ ಪಡೆಯುತ್ತಿದ್ದರು. ನಂಜನಗೂಡಿಗೆ ಆಗಮಿಸಿದ ಅತಿಥಿಗಳಿಗೆ ನೀಡುವ ಆತಿಥ್ಯದಲ್ಲಿ ಈ ರಸಬಾಳೆ ಹಣ್ಣಿಗೂ ದೊಡ್ಡ ಸ್ಥಾನ ಇತ್ತು. ಈಗ ಅದೇ ಪರಂಪರೆ ಮುಂದುವರಿಯಲಿದೆ ಎಂಬುದು ರಸಬಾಳೆ ಬೆಳೆಗಾರರ ವಿಶ್ವಾಸವಾಗಿದೆ.

-ಸಿ.ಚಂದ್ರು, ಹಿರಿಯ ಸಹಾಯಕ ನಿರ್ದೇಶಕ, ನಂಜನಗೂಡು ತೋಟಗಾರಿಕೆ ಇಲಾಖೆ.

ಶಾಸಕ ದರ್ಶನ್ ಧ್ರುವನಾರಾಯಣ ಅವರು ಹೆಚ್ಚಿನ ಒತ್ತು ನೀಡಿ ಬಜೆಟ್‌ನಲ್ಲಿ ರಸಬಾಳೆ ಬೆಳೆಗೆ ಅನುದಾನ ಮೀಸಲಿಡಲು ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳೆಗೆ ಸವಲತ್ತು ನೀಡಿದರು. ತೋಟಗಾರಿಕೆ ಇಲಾಖೆ ವತಿಯಿಂದ ಜಾಗೃತಿ ಮೂಡಿಸಿ ಸಬ್ಸಿಡಿ ಹಣದ ಬಗ್ಗೆ ಮಾಹಿತಿ ನೀಡಿದ್ದೆವು. ಹೀಗಾಗಿ ರಸಬಾಳೆ ಬೆಳೆಯುವವರ ಸಂಖ್ಯೆ ಹೆಚ್ಚಾಗಿದೆ.

-ಕುರಹಟ್ಟಿ ನಂಜುಂಡಸ್ವಾಮಿ, ರಸಬಾಳೆ ರೈತ.

ಸರ್ಕಾರದ ಪ್ರೋತ್ಸಾಹ ಧನ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಮೂಲಕ ರಸಬಾಳೆ ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಿದೆ. ನನಗೆ ಈ ಬಾರಿ ಒಳ್ಳೆಯ ಇಳುವರಿ ಬಂದಿದೆ. ರಸಬಾಳೆ ಬೆಳೆಯ ಉತ್ತೇಜನಕ್ಕೆ ತಾಲ್ಲೂಕು ತೋಟಗಾರಿಕೆಗೆ ಒತ್ತು ನೀಡಿ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವ ಪರಿಣಾಮ ರೈತರ ಸಂಖ್ಯೆ ಅಧಿಕವಾಗಿದೆ.

 

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

25 mins ago

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…

1 hour ago

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…

2 hours ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

2 hours ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

2 hours ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago