ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ ವಿವಾದಗಳಿಗೆ ಗುರಿಯಾಗದೆ ತಮ್ಮ ಔದ್ಯೋಗಿಕ ಸಾಮ್ರಾಜ್ಯವನ್ನು ಕಟ್ಟಿದವರು ರತನ್ ಟಾಟಾ. ವಿದೇಶಗಳಿಗೂ ತಮ್ಮ ಸಂಸ್ಥೆಯನ್ನು ವಿಸ್ತರಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಕಂಪೆನಿ ಗಳಿಸಿದ ಲಾಭದ ಬಹುಪಾಲನ್ನು ಸಮಾಜಕ್ಕೇ ಕೊಡುಗೆಯಾಗಿ ನೀಡಿದ್ದಾರೆ. ಇಂತಹ ಮೇರು ವ್ಯಕ್ತಿತ್ವ ಹೊಂದಿದ್ದ ರತನ್ ಟಾಟಾರ ನಿರ್ಗಮನ ದೇಶದ ಔದ್ಯೋಗಿಕ ವಲಯಕ್ಕೆ ಮಾತ್ರವಲ್ಲದೇ ದಾನ-ಧರ್ಮ ಮಾಡಬೇಕು ಎಂಬ ಪರಿಕಲ್ಪನೆಗೂ ದೊಡ್ಡ ಪೆಟ್ಟು ಬಿದ್ದಂತಾಗಿದೆ. ಇಂತಹ ವ್ಯಕ್ತಿ ಜೀವಂತವಿದ್ದಾಗ ‘ಭಾರತ ರತ್ನ’ ನೀಡಿ ಗೌರವಿಸಬೇಕಿತ್ತು. ಅದ್ಯಾವುದನ್ನೂ ಮಾಡದ ಜನಪ್ರತಿನಿಧಿಗಳು ಈಗ ಅವರ ನಿಧನಕ್ಕೆ ಕಂಬನಿ ಮಿಡಿಯುವುದು ಹಾಸ್ಯಾಸ್ಪದ. ಸರ್ಕಾರ ಅವರಿಗೆ ಮರಣೋತ್ತರವಾಗಿಯಾದರೂ ‘ಭಾರತ ರತ್ನ’ ನೀಡಿ ಗೌರವಿಸಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…