ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ ವಿವಾದಗಳಿಗೆ ಗುರಿಯಾಗದೆ ತಮ್ಮ ಔದ್ಯೋಗಿಕ ಸಾಮ್ರಾಜ್ಯವನ್ನು ಕಟ್ಟಿದವರು ರತನ್ ಟಾಟಾ. ವಿದೇಶಗಳಿಗೂ ತಮ್ಮ ಸಂಸ್ಥೆಯನ್ನು ವಿಸ್ತರಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಕಂಪೆನಿ ಗಳಿಸಿದ ಲಾಭದ ಬಹುಪಾಲನ್ನು ಸಮಾಜಕ್ಕೇ ಕೊಡುಗೆಯಾಗಿ ನೀಡಿದ್ದಾರೆ. ಇಂತಹ ಮೇರು ವ್ಯಕ್ತಿತ್ವ ಹೊಂದಿದ್ದ ರತನ್ ಟಾಟಾರ ನಿರ್ಗಮನ ದೇಶದ ಔದ್ಯೋಗಿಕ ವಲಯಕ್ಕೆ ಮಾತ್ರವಲ್ಲದೇ ದಾನ-ಧರ್ಮ ಮಾಡಬೇಕು ಎಂಬ ಪರಿಕಲ್ಪನೆಗೂ ದೊಡ್ಡ ಪೆಟ್ಟು ಬಿದ್ದಂತಾಗಿದೆ. ಇಂತಹ ವ್ಯಕ್ತಿ ಜೀವಂತವಿದ್ದಾಗ ‘ಭಾರತ ರತ್ನ’ ನೀಡಿ ಗೌರವಿಸಬೇಕಿತ್ತು. ಅದ್ಯಾವುದನ್ನೂ ಮಾಡದ ಜನಪ್ರತಿನಿಧಿಗಳು ಈಗ ಅವರ ನಿಧನಕ್ಕೆ ಕಂಬನಿ ಮಿಡಿಯುವುದು ಹಾಸ್ಯಾಸ್ಪದ. ಸರ್ಕಾರ ಅವರಿಗೆ ಮರಣೋತ್ತರವಾಗಿಯಾದರೂ ‘ಭಾರತ ರತ್ನ’ ನೀಡಿ ಗೌರವಿಸಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…