ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ ವಿವಾದಗಳಿಗೆ ಗುರಿಯಾಗದೆ ತಮ್ಮ ಔದ್ಯೋಗಿಕ ಸಾಮ್ರಾಜ್ಯವನ್ನು ಕಟ್ಟಿದವರು ರತನ್ ಟಾಟಾ. ವಿದೇಶಗಳಿಗೂ ತಮ್ಮ ಸಂಸ್ಥೆಯನ್ನು ವಿಸ್ತರಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಕಂಪೆನಿ ಗಳಿಸಿದ ಲಾಭದ ಬಹುಪಾಲನ್ನು ಸಮಾಜಕ್ಕೇ ಕೊಡುಗೆಯಾಗಿ ನೀಡಿದ್ದಾರೆ. ಇಂತಹ ಮೇರು ವ್ಯಕ್ತಿತ್ವ ಹೊಂದಿದ್ದ ರತನ್ ಟಾಟಾರ ನಿರ್ಗಮನ ದೇಶದ ಔದ್ಯೋಗಿಕ ವಲಯಕ್ಕೆ ಮಾತ್ರವಲ್ಲದೇ ದಾನ-ಧರ್ಮ ಮಾಡಬೇಕು ಎಂಬ ಪರಿಕಲ್ಪನೆಗೂ ದೊಡ್ಡ ಪೆಟ್ಟು ಬಿದ್ದಂತಾಗಿದೆ. ಇಂತಹ ವ್ಯಕ್ತಿ ಜೀವಂತವಿದ್ದಾಗ ‘ಭಾರತ ರತ್ನ’ ನೀಡಿ ಗೌರವಿಸಬೇಕಿತ್ತು. ಅದ್ಯಾವುದನ್ನೂ ಮಾಡದ ಜನಪ್ರತಿನಿಧಿಗಳು ಈಗ ಅವರ ನಿಧನಕ್ಕೆ ಕಂಬನಿ ಮಿಡಿಯುವುದು ಹಾಸ್ಯಾಸ್ಪದ. ಸರ್ಕಾರ ಅವರಿಗೆ ಮರಣೋತ್ತರವಾಗಿಯಾದರೂ ‘ಭಾರತ ರತ್ನ’ ನೀಡಿ ಗೌರವಿಸಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…