Andolana originals

ಎಳನೀರು ದರ ಬಾನೆತ್ತರ; ಗ್ರಾಹಕ ತತ್ತರ

ಬೇಸಿಗೆ, ರೋಗಬಾಧೆಯಿಂದ ಬೇಡಿಕೆಯ ಕಾಲುಭಾಗದಷ್ಟು ಎಳನೀರು ಮಾರುಕಟ್ಟೆಗೆ ಪೂರೈಕೆ; ತೆಂಗಿನಕಾಯಿಮದರ ಹೆಚ್ಚಳದಿಂದ ಎಳನೀರು ಮಾರಾಟಕ್ಕೆ ರೈತರ ಹಿಂದೇಟು

ಚಿರಂಜೀವಿ ಸಿ. ಹುಲ್ಲಹಳ್ಳಿ
ಮೈಸೂರು: ಬೇಸಿಗೆ ಬಿಸಿಲ ಝಳದಿಂದ ಬಳಲಿರುವ ಜನತೆ ಸುಡು ಬಿಸಿಲು ತಾಳಲಾರದೆ ದಣಿವು ನೀಗಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಬೇಡಿಕೆ ಹೆಚ್ಚುತ್ತಿರುವ ಕಾರಣ ನೈಸರ್ಗಿಕ ಪಾನೀಯ ಎಳನೀರಿನ ಬೆಲೆ ಗಗನಕ್ಕೇರಿದೆ.

ರೋಗಬಾಧೆಯಿಂದಾಗಿ ಮಾರುಕಟ್ಟೆಗೆ ಬೇಡಿಕೆಯಷ್ಟು ಎಳನೀರು ಪೂರೈಕೆ ಯಾಗುತ್ತಿಲ್ಲ. ಈ ಬೇಸಿಗೆಯಲ್ಲಿ ಬೇಡಿಕೆಯ ಕಾಲು ಭಾಗದಷ್ಟು ಎಳನೀರು ಪೂರೈಕೆ ಮಾಡುವುದು ಸವಾಲಿನ ಕೆಲಸವಾಗಿದೆ. ಜತೆಗೆ ಹೊರ ರಾಜ್ಯ ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಎಳನೀರು ಸಾಗಣೆ ಯಾಗುತ್ತಿರುವುದರಿಂದ ಸ್ಥಳೀಯವಾಗಿ ಎಳ ನೀರು ಕೊರತೆ ಉಂಟಾಗಿದೆ. ಹಾಗಾಗಿ ಎಳನೀರಿನ ದರ ೮೦ ರೂಪಾಯಿ ದಾಟುವ ಸಾಧ್ಯತೆ ಹೆಚ್ಚಿದೆ.

ನಗರದ ಮಹಾರಾಜ ಕಾಲೇಜು ಮೈದಾನ, ಆರ್‌ಟಿಒ ವೃತ್ತ, ಸಿದ್ದಪ್ಪ ಚೌಕ, ನೂರು ಅಡಿ ರಸ್ತೆ ಹಾಗೂ ಹಲವು ಬಡಾವಣೆಗಳು, ಹೊರ ವರ್ತುಲ ರಸ್ತೆಗಳಲ್ಲಿ ಎಳನೀರು ವ್ಯಾಪಾರ ಜೋರಾಗಿದೆ. ಆದರೆ, ದರ ಕೇಳಿದ ತಕ್ಷಣ ಗ್ರಾಹಕರು ಬೆಚ್ಚಿ ಬೀಳುತ್ತಿದ್ದು, ಎಳನೀರನ್ನು ಕುಡಿಯದೆ ತಂಪು ಪಾನೀಯಗಳ ಮೊರೆ ಹೋಗುತ್ತಿ ದ್ದಾರೆ. ಒಂದೊಂದು ಭಾಗದಲ್ಲಿ ಒಂದೊಂದು ದರದಲ್ಲಿ ಎಳನೀರು ಮಾರಾಟವಾಗುತ್ತಿದೆ. ಮಹಾರಾಜ ಕಾಲೇಜು ಮೈದಾನದ ಬಳಿ ನಿತ್ಯ ೨೦೦ರಿಂದ ೩೦೦ರಷ್ಟು ಎಳನೀರು ಮಾರಾಟವಾಗುತ್ತದೆ. ನಮ್ಮಲ್ಲಿ ನಿತ್ಯ ೧೫೦-೨೦೦ ಎಳನೀರು ಮಾರುತ್ತೇವೆ. ಒಂದೊಂದು ದಿನ ವ್ಯಾಪಾರ ನಡೆಯುವುದಿಲ್ಲ. ಈಗಂತೂ ತೋಟಗಳಲ್ಲಿ ಎಳನೀರು ಸಿಗುತ್ತಿಲ್ಲ. ತೆಂಗಿನ ಕಾಯಿ ಬೆಲೆ ಹೆಚ್ಚಳದಿಂದ ರೈತರು ಕಾಯಿ ಮಾಡಿ ಮಾರುತ್ತಿದ್ದಾರೆ. ಹೀಗಾಗಿ ಬೇಡಿಕೆ ಹೆಚ್ಚಾಗಿದೆ. ಹೀಗೆ ಮುಂದುವರಿದರೆ ಬೇಸಿಗೆಯಲ್ಲಿ ಮತ್ತಷ್ಟು ದರ ಹೆಚ್ಚಾಗಲಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಜಿಲ್ಲೆಯ ನಂಜನಗೂಡು, ತಿ. ನರಸೀಪುರ, ಹುಣಸೂರು, ಕೆ. ಆರ್. ನಗರ, ಪಿರಿಯಾಪಟ್ಟಣ ಸೇರಿದಂತೆ ಮಂಡ್ಯ ಜಿಲ್ಲೆಯ ತೆಂಗಿನ ತೋಟ ಗಳಿಂದ ಎಳನೀರು ತಂದು ಮಾರುವ ಮಾರಾಟ ಗಾರರ ಪ್ರಕಾರ ಬೇಸಿಗೆ ಬರುವ ಮೊದಲೇ ಎಳನೀರು ಪೂರೈಕೆ ಕಡಿಮೆಯಾಗಿದೆ. ಇದರಿಂದ ಈಗಾಗಲೇ ಒಂದು ಎಳನೀರಿಗೆ ೬೦ ರೂ. ಬೆಲೆ ಇದೆ. ಮುಂದಿನ ವಾರಗಳಲ್ಲಿ ಮಳೆ ಸುರಿಯದಿದ್ದರೆ ೭೦-೮೦ ರೂ. ಏರಬಹುದು ಎಂದು ನಂಜುಮಳಿಗೆಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿರುವ ಬನ್ನೂರಿನ ಸ್ವಾಮಿ ಹೇಳುತ್ತಾರೆ.

ತೆಂಗಿಗೆ ರೋಗಬಾಧೆ: ಕಳೆದ ಬೇಸಿಗೆಯ ಒಣ ಹವಾಮಾನವು ತೆಂಗಿನಕಾಯಿಯ ಪ್ರಸ್ತುತ ಇಳುವರಿಯ ಮೇಲೆ ಪರಿಣಾಮ ಬೀರಿದೆ. ಹೊಸ ಹೂ ಬಿಡುವ ಋತುವಿನಲ್ಲಿ ಇಳುವರಿಯೂ ಕಡಿಮೆಯಾಗುತ್ತಿದೆ.

ಬಿಸಿಲಿನ ಬೇಗೆಗೆ ತೆಂಗಿನ ಗರಿಗಳು ಬಾಡುತ್ತಿವೆ. ಕಾಯಿಗಳಿಗೆ ನುಸಿ ರೋಗದ ಕಾಟ ಹೆಚ್ಚಾಗಿದೆ. ೫೦ ಕಾಯಿ ಬಿಡುವ ಮರ ಕೇವಲ ೧೦ ಕಾಯಿಗಳನ್ನು ಬಿಡುತ್ತಿದೆ. ತೆಂಗಿನ ದರವೂ ಹೆಚ್ಚಿದೆ. ದುಂಬಿಗಳ ಕಾಟ ಜಾಸ್ತಿಯಾಗಿ ಮರಗಳು ಹಾಳಾಗುತ್ತಿವೆ. ಹೀಗಾಗಿ ದರ ಹೆಚ್ಚಾಗಿದೆ ಎಂದು ನಾಗನಹಳ್ಳಿಯ ರೈತ ಚಂದ್ರಶೇಖರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

8 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

9 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

9 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

10 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

10 hours ago