ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು ಹೋಗಿದ್ದು, ಉಳಿದ ಭಾಗಗಳಲ್ಲಿ ಡಾಂಬರೀಕರಣ ಮಾಡಲಾಗಿದೆ.
ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ವಾಹನಗಳು ಸಂಚರಿಸಿದಂತೆಲ್ಲ ವಿಪರೀತ ದೂಳು ಆವರಿಸುತ್ತಿದೆ. ಅಲ್ಲದೆ, ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಅನೇಕ ಬಾರಿ ಗುಂಡಿ ತಪ್ಪಿಸಲುಹೋಗಿ ಅಪಘಾತವಾಗಿರುವ ಉದಾಹರಣೆಗಳಿವೆ. ಇನ್ನು ಮಳೆಗಾಲ ಬಂತೂ ಎಂದರೆ ಈ ರಸ್ತೆ ಸಂಪೂರ್ಣವಾಗಿ ಕೆಸರಿನ ಗದ್ದೆಯಂತಾಗಲಿದೆ. ಈ ವೇಳೆ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡಬೇಕಾಗುತ್ತದೆ.
ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಸ್ತೆಯನ್ನು ಡಾಂಬರೀಕರಣ ಮಾಡಬೇಕಿದೆ.
-ಎಂ.ದರ್ಶಿನಿ, ಸಿಂಗರಮಾರನಹಳ್ಳಿ, ಎಚ್.ಡಿ.ಕೋಟೆ ತಾ.





