ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು ಹೋಗಿದ್ದು, ಉಳಿದ ಭಾಗಗಳಲ್ಲಿ ಡಾಂಬರೀಕರಣ ಮಾಡಲಾಗಿದೆ.
ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ವಾಹನಗಳು ಸಂಚರಿಸಿದಂತೆಲ್ಲ ವಿಪರೀತ ದೂಳು ಆವರಿಸುತ್ತಿದೆ. ಅಲ್ಲದೆ, ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಅನೇಕ ಬಾರಿ ಗುಂಡಿ ತಪ್ಪಿಸಲುಹೋಗಿ ಅಪಘಾತವಾಗಿರುವ ಉದಾಹರಣೆಗಳಿವೆ. ಇನ್ನು ಮಳೆಗಾಲ ಬಂತೂ ಎಂದರೆ ಈ ರಸ್ತೆ ಸಂಪೂರ್ಣವಾಗಿ ಕೆಸರಿನ ಗದ್ದೆಯಂತಾಗಲಿದೆ. ಈ ವೇಳೆ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡಬೇಕಾಗುತ್ತದೆ.
ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಸ್ತೆಯನ್ನು ಡಾಂಬರೀಕರಣ ಮಾಡಬೇಕಿದೆ.
-ಎಂ.ದರ್ಶಿನಿ, ಸಿಂಗರಮಾರನಹಳ್ಳಿ, ಎಚ್.ಡಿ.ಕೋಟೆ ತಾ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…