ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು ಹೋಗಿದ್ದು, ಉಳಿದ ಭಾಗಗಳಲ್ಲಿ ಡಾಂಬರೀಕರಣ ಮಾಡಲಾಗಿದೆ.
ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ವಾಹನಗಳು ಸಂಚರಿಸಿದಂತೆಲ್ಲ ವಿಪರೀತ ದೂಳು ಆವರಿಸುತ್ತಿದೆ. ಅಲ್ಲದೆ, ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಅನೇಕ ಬಾರಿ ಗುಂಡಿ ತಪ್ಪಿಸಲುಹೋಗಿ ಅಪಘಾತವಾಗಿರುವ ಉದಾಹರಣೆಗಳಿವೆ. ಇನ್ನು ಮಳೆಗಾಲ ಬಂತೂ ಎಂದರೆ ಈ ರಸ್ತೆ ಸಂಪೂರ್ಣವಾಗಿ ಕೆಸರಿನ ಗದ್ದೆಯಂತಾಗಲಿದೆ. ಈ ವೇಳೆ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡಬೇಕಾಗುತ್ತದೆ.
ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಸ್ತೆಯನ್ನು ಡಾಂಬರೀಕರಣ ಮಾಡಬೇಕಿದೆ.
-ಎಂ.ದರ್ಶಿನಿ, ಸಿಂಗರಮಾರನಹಳ್ಳಿ, ಎಚ್.ಡಿ.ಕೋಟೆ ತಾ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…