ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು ಹೋಗಿದ್ದು, ಉಳಿದ ಭಾಗಗಳಲ್ಲಿ ಡಾಂಬರೀಕರಣ ಮಾಡಲಾಗಿದೆ.
ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ವಾಹನಗಳು ಸಂಚರಿಸಿದಂತೆಲ್ಲ ವಿಪರೀತ ದೂಳು ಆವರಿಸುತ್ತಿದೆ. ಅಲ್ಲದೆ, ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಅನೇಕ ಬಾರಿ ಗುಂಡಿ ತಪ್ಪಿಸಲುಹೋಗಿ ಅಪಘಾತವಾಗಿರುವ ಉದಾಹರಣೆಗಳಿವೆ. ಇನ್ನು ಮಳೆಗಾಲ ಬಂತೂ ಎಂದರೆ ಈ ರಸ್ತೆ ಸಂಪೂರ್ಣವಾಗಿ ಕೆಸರಿನ ಗದ್ದೆಯಂತಾಗಲಿದೆ. ಈ ವೇಳೆ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡಬೇಕಾಗುತ್ತದೆ.
ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಸ್ತೆಯನ್ನು ಡಾಂಬರೀಕರಣ ಮಾಡಬೇಕಿದೆ.
-ಎಂ.ದರ್ಶಿನಿ, ಸಿಂಗರಮಾರನಹಳ್ಳಿ, ಎಚ್.ಡಿ.ಕೋಟೆ ತಾ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…