ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ ಬದಿಯ ಚರಂಡಿಗಳು ಕಟ್ಟಿಕೊಂಡಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಚರಂಡಿಗಳನ್ನು ನಿರ್ಮಿಸಿ ಸುಮಾರು 25 ವರ್ಷಗಳೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹೂಳು ತುಂಬಿಕೊಂಡಿವೆ. ಇದರಿಂದಾಗಿ ನೀರು ಚರಂಡಿಯಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ.
ಇನ್ನು ಮಳೆಗಾಲ ಬಂತು ಎಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೇ ರಸ್ತೆಯಲ್ಲಿಯೇ ಹರಿಯುತ್ತದೆ. ಸಾಧಾರಣ ಮಳೆಯಾದರೂ ಇಲ್ಲಿನ ರಸ್ತೆಗಳು ಕೆರೆಯಂತಾಗುತ್ತವೆ. ಇದರಿಂದಾಗಿ ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡಲು ಪರದಾಡುವಂತಾಗಿದೆ. ಇನ್ನು ಈ ಭಾಗದಲ್ಲಿ ಕಸ ವಿಲೇವಾರಿ ಮಾಡಲು ಸೂಕ್ತ ಸ್ಥಳ ನಿಗದಿ ಮಾಡದ ಪರಿಣಾಮ ಅಕ್ಕಪಕ್ಕದ ಅಂಗಡಿಯವರು, ಹೋಟೆಲಿನವರು, ತರಕಾರಿ ವ್ಯಾಪಾರಿಗಳು ರಸ್ತೆ ಓದಿಯಲ್ಲಿಯೇ ಕಸವನ್ನು ತಂದು ಸುರಿಯುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಈ ಬಗ್ಗೆ ಗಮನಹರಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆನೀರು ಸರಾಗವಾಗಿ ಹರಿದುಹೋಗು
ವಂತೆ ಮಾಡುವ ಜತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…