ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ ಬದಿಯ ಚರಂಡಿಗಳು ಕಟ್ಟಿಕೊಂಡಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಚರಂಡಿಗಳನ್ನು ನಿರ್ಮಿಸಿ ಸುಮಾರು 25 ವರ್ಷಗಳೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹೂಳು ತುಂಬಿಕೊಂಡಿವೆ. ಇದರಿಂದಾಗಿ ನೀರು ಚರಂಡಿಯಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ.
ಇನ್ನು ಮಳೆಗಾಲ ಬಂತು ಎಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೇ ರಸ್ತೆಯಲ್ಲಿಯೇ ಹರಿಯುತ್ತದೆ. ಸಾಧಾರಣ ಮಳೆಯಾದರೂ ಇಲ್ಲಿನ ರಸ್ತೆಗಳು ಕೆರೆಯಂತಾಗುತ್ತವೆ. ಇದರಿಂದಾಗಿ ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡಲು ಪರದಾಡುವಂತಾಗಿದೆ. ಇನ್ನು ಈ ಭಾಗದಲ್ಲಿ ಕಸ ವಿಲೇವಾರಿ ಮಾಡಲು ಸೂಕ್ತ ಸ್ಥಳ ನಿಗದಿ ಮಾಡದ ಪರಿಣಾಮ ಅಕ್ಕಪಕ್ಕದ ಅಂಗಡಿಯವರು, ಹೋಟೆಲಿನವರು, ತರಕಾರಿ ವ್ಯಾಪಾರಿಗಳು ರಸ್ತೆ ಓದಿಯಲ್ಲಿಯೇ ಕಸವನ್ನು ತಂದು ಸುರಿಯುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಈ ಬಗ್ಗೆ ಗಮನಹರಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆನೀರು ಸರಾಗವಾಗಿ ಹರಿದುಹೋಗು
ವಂತೆ ಮಾಡುವ ಜತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…