ಓದುಗರ ಪತ್ರ
ರಾಜ್ಯ ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್ರವರು ೧೮ ಮಂದಿ ಬಿಜೆಪಿ ಶಾಸಕರ ಅಮಾನತ್ತು ಆದೇಶವನ್ನು ರದ್ದುಪಡಿಸಿರುವುದು ಸ್ವಾಗತಾರ್ಹವಾಗಿದೆ. ಕಳೆದ ವಿಧಾನ ಸಭೆಯ ಅಽವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ್ದಾರೆಂದು ಬಿಜೆಪಿಯ ೧೮ ಮಂದಿ ಶಾಸಕರನ್ನು ೬ ತಿಂಗಳ ಕಾಲ ಅಮಾನತ್ತುಗೊಳಿಸಲಾಗಿತ್ತು. ಅಮಾನತ್ತುಗೊಂಡಿದ್ದ ಶಾಸಕರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಅಮಾನತ್ತನ್ನು ರದ್ದುಗೊಳಿಸುವಂತೆ ರಾಜ್ಯ ವಿಧಾನಸಭೆಯ ಅಧ್ಯಕ್ಷರಿಗೆ ಸೂಚಿಸಬೇಕೆಂದು ಮನವಿ ಮಾಡಿದ್ದರು. ರಾಜ್ಯಪಾಲರು ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಅಮಾನತ್ತುಗೊಂಡಿದ್ದ ೧೮ ಮಂದಿ ಶಾಸಕರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಸೂಚಿಸಿ ದ್ದರು. ಇದೀಗ ಈ ಎಲ್ಲಾ ಶಾಸಕರ ಅಮಾನತ್ತನ್ನು ವಿಧಾನಸಭಾಧ್ಯಕ್ಷರು ರದ್ದುಗೊಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ಸರ್ವೇ ಸಾಮಾನ್ಯ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಅಂತಿಮ ಗುರಿ ಜನತಾ ಕಲ್ಯಾಣ. ಇದಕ್ಕಾಗಿ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ,ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…