ಓದುಗರ ಪತ್ರ
ಕನ್ನಡಿಗರ ಅಸ್ಮಿತೆ ಇನಾದರೂ ಅರಳಬಹುದೇ?
ಅಂತಾರಾಷ್ಟ್ರೀಯ ಟೆಕ್ ದೈತ್ಯ ‘ಗೂಗಲ್’ ಬೆಂಗಳೂರಿನಲ್ಲಿ ಕಚೇರಿ ತೆರೆಯುತ್ತಿದ್ದು, ಕ್ಯಾಂಪಸ್ಸಿಗೆ ‘ಅನಂತ’ ಎಂದು ಹೆಸರಿಡುವ ಜತೆಗೆ ಸಭಾಂಗಣಕ್ಕೆ ‘ಸಭಾ’ ಮತ್ತು ಕ್ಯಾಂಪಸ್ಸಿನಲ್ಲಿ ನಿರ್ಮಿಸಿರುವ ಕಿರುಕಾನನಕ್ಕೆ ‘ಅರಣ್ಯ’ ಎಂದು ಹೆಸರಿಟ್ಟಿದೆ.
ಇತ್ತೀಚಿನ ವರ್ಷಗಳಲ್ಲಿ ಅನ್ಯಭಾಷಿಗರ ಹಾವಳಿಯಿಂದಾಗಿ ಬೆಂಗಳೂರಿನಲ್ಲಿ ಕನ್ನಡವೇ ಮರೆಯಾಗುತ್ತಿದೆ. ಕನ್ನಡಿಗರೂ ಕೂಡ ಕನ್ನಡ ಮಾತನಾಡಲು ಹಿಂಜರಿಯುತ್ತಾರೆ. ಅಲ್ಲದೆ ಕೆಲವರು ತಮ್ಮ ಮನೆ, ವ್ಯವಹಾರ, ಕಚೇರಿ, ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ಇಂಗ್ಲಿಷ್ನಲ್ಲೇ ವ್ಯವಹರಿಸುವುದು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಹೋಗಿದೆ. ಇಲ್ಲಿಗೆ ಬಂದು ದುಡಿಯುವ, ಇಲ್ಲಿಯೇ ಜೀವನ ಸಾಗಿಸುತ್ತಿರುವ ಅನ್ಯಭಾಷಿಗರು ಕನ್ನಡವನ್ನು ನಿಕೃಷ್ಟವಾಗಿ ನೋಡುತ್ತಿದ್ದಾರೆ.ಅಂತಹವರ ನಡುವೆ ಗೂಗಲ್ ಬೆಂಗಳೂರಿನ ಕ್ಯಾಂಪಸ್ಗೆ ಕನ್ನಡದಲ್ಲಿ ಹೆಸರಿಡುವ ಮೂಲಕ ಕನ್ನಡದ ಬಗ್ಗೆ ಅರಿವು ಮೂಡಿಸಿ ಮಾದರಿಯಾಗಿದೆ ಎಂದರೆ ತಪ್ಪಾಗಲಾರದು.
ಕನ್ನಡಿಗರಲ್ಲಿ ಕನ್ನಡ ಭಾಷಾ ಮತ್ತು ಸಂಸ್ಕೃತಿಯ ಅಸ್ಮಿತೆಯನ್ನುಅರಳಿಸಲು ಇದಕ್ಕಿಂತ ಹೆಚ್ಚು ಪರಿಣಾಮಕಾರಿಯಾದ ಮತ್ತೊಂದು ಅಸ್ತ್ರಬೇಕಿಲ್ಲ. ಗೂಗಲ್ ಕನ್ನಡದ ಬಗೆಗಿನ ಈ ಔದಾರ್ಯ ಮತ್ತು ಪ್ರೇಮವನ್ನು ಉದ್ಯೋಗಿಗಳ ನೇಮಕಾತಿಯಲ್ಲೂ ತೋರಿಸಲಿ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…