Andolana originals

ಓದುಗರ ಪತ್ರ: ಕನ್ನಡಿಗರ  ಅಸ್ಮಿತೆ ಇನಾದರೂ ಅರಳಬಹುದೇ?

ಕನ್ನಡಿಗರ  ಅಸ್ಮಿತೆ ಇನಾದರೂ ಅರಳಬಹುದೇ?

ಅಂತಾರಾಷ್ಟ್ರೀಯ ಟೆಕ್ ದೈತ್ಯ ‘ಗೂಗಲ್’ ಬೆಂಗಳೂರಿನಲ್ಲಿ ಕಚೇರಿ ತೆರೆಯುತ್ತಿದ್ದು, ಕ್ಯಾಂಪಸ್ಸಿಗೆ ‘ಅನಂತ’ ಎಂದು ಹೆಸರಿಡುವ ಜತೆಗೆ ಸಭಾಂಗಣಕ್ಕೆ ‘ಸಭಾ’ ಮತ್ತು ಕ್ಯಾಂಪಸ್ಸಿನಲ್ಲಿ ನಿರ್ಮಿಸಿರುವ ಕಿರುಕಾನನಕ್ಕೆ ‘ಅರಣ್ಯ’ ಎಂದು ಹೆಸರಿಟ್ಟಿದೆ.

ಇತ್ತೀಚಿನ ವರ್ಷಗಳಲ್ಲಿ ಅನ್ಯಭಾಷಿಗರ ಹಾವಳಿಯಿಂದಾಗಿ ಬೆಂಗಳೂರಿನಲ್ಲಿ ಕನ್ನಡವೇ ಮರೆಯಾಗುತ್ತಿದೆ. ಕನ್ನಡಿಗರೂ ಕೂಡ ಕನ್ನಡ ಮಾತನಾಡಲು ಹಿಂಜರಿಯುತ್ತಾರೆ. ಅಲ್ಲದೆ ಕೆಲವರು ತಮ್ಮ ಮನೆ, ವ್ಯವಹಾರ, ಕಚೇರಿ, ಅಪಾರ್ಟ್‌ಮೆಂಟ್, ಮಾಲ್ಗಳಲ್ಲಿ ಇಂಗ್ಲಿಷ್‌ನಲ್ಲೇ ವ್ಯವಹರಿಸುವುದು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಹೋಗಿದೆ. ಇಲ್ಲಿಗೆ ಬಂದು ದುಡಿಯುವ, ಇಲ್ಲಿಯೇ ಜೀವನ ಸಾಗಿಸುತ್ತಿರುವ ಅನ್ಯಭಾಷಿಗರು ಕನ್ನಡವನ್ನು ನಿಕೃಷ್ಟವಾಗಿ ನೋಡುತ್ತಿದ್ದಾರೆ.ಅಂತಹವರ ನಡುವೆ ಗೂಗಲ್ ಬೆಂಗಳೂರಿನ ಕ್ಯಾಂಪಸ್‌ಗೆ ಕನ್ನಡದಲ್ಲಿ ಹೆಸರಿಡುವ ಮೂಲಕ ಕನ್ನಡದ ಬಗ್ಗೆ ಅರಿವು ಮೂಡಿಸಿ ಮಾದರಿಯಾಗಿದೆ ಎಂದರೆ ತಪ್ಪಾಗಲಾರದು.

ಕನ್ನಡಿಗರಲ್ಲಿ ಕನ್ನಡ ಭಾಷಾ ಮತ್ತು ಸಂಸ್ಕೃತಿಯ ಅಸ್ಮಿತೆಯನ್ನುಅರಳಿಸಲು ಇದಕ್ಕಿಂತ ಹೆಚ್ಚು ಪರಿಣಾಮಕಾರಿಯಾದ ಮತ್ತೊಂದು ಅಸ್ತ್ರಬೇಕಿಲ್ಲ. ಗೂಗಲ್ ಕನ್ನಡದ ಬಗೆಗಿನ ಈ ಔದಾರ್ಯ ಮತ್ತು ಪ್ರೇಮವನ್ನು ಉದ್ಯೋಗಿಗಳ ನೇಮಕಾತಿಯಲ್ಲೂ ತೋರಿಸಲಿ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago