ಓದುಗರ ಪತ್ರ
ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ ಗ್ಯಾರಂಟಿ. ರಸ್ತೆಯ ಬದಿಯಲ್ಲಿರುವ ನಾಲೆಯಲ್ಲಿ ಗಿಡಗಂಟಿಗಳು ಬೆಳೆದು ನಾಲೆಯೇ ಕಾಣಿಸುತ್ತಿಲ್ಲ, ಅಪರಿಚಿತ ವಾಹನ ಸವಾರರು ಈ ರಸ್ತೆಯ ತಿರುವಿನಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನೀರು ಪಾಲಾಗುವುದು ಗ್ಯಾರಂಟಿ. ಆದ್ದರಿಂದ ಕಾಲುವೆ ಹೂಳು ತೆಗಿಸಿ, ರಸ್ತೆಯ ಬದಿಯ ನಾಲೆಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ತಡೆಗೋಡೆ ನಿರ್ಮಿಸಲು ಮುಂದಾಗಬೇಕು.
-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…