Andolana originals

ಓದುಗರ ಪತ್ರ: ಪುಸ್ತಕಗಳ ಆಯ್ಕೆಯಲ್ಲಿ ಮಲತಾಯಿ ಧೋರಣೆ ಏಕೆ?

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯು 2024ನೇ ಸಾಲಿಗೆ ಒಂದೇ ಒಂದು ಚುಟುಕು ಸಾಹಿತ್ಯದ ಪುಸ್ತಕವನ್ನೂ ಆಯ್ಕೆ ಮಾಡದಿರುವುದು ಚುಟುಕು ಸಾಹಿತಿಗಳಿಗೆ ಬೇಸರ ಮೂಡಿಸಿದೆ.

ಚುಟುಕು ಸಾಹಿತ್ಯ ಬದುಕಿಗೆ ಲಾಲಿತ್ಯ ಪೋಷಣೆಗಳನ್ನು ನೀಡುವ ಜತೆಗೆ ಆಸಕ್ತಿ ಅಭಿಮಾನಿಗಳನ್ನೂ ಹೊಂದಿದೆ. ಆದರೆ ಪುಸ್ತಕಗಳ ಆಯ್ಕೆ ಸಮಿತಿಯವರು ಚುಟುಕು ಸಾಹಿತ್ಯದ ಪುಸ್ತಕಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿರುವುದು ಸರಿಯಲ್ಲ. 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಚುಟುಕು ರತ್ನ ಸಿಪಿಕೆಯವರು ಚುಟುಕು ಸಾಹಿತ್ಯ ಮನುಕುಲದ ಅಧಿಕಾವ್ಯ ಎಂದು ವರ್ಣಿಸಿ ಗ್ರಂಥ ರಚಿಸಿದ್ದಾರೆ.

ದೇಜಗೌ, ಚನ್ನವೀರ ಕಣವಿ, ಚಿದಾನಂದ ಗೌಡ, ನ್ಯಾಯಮೂರ್ತಿ ಜಿನದತ್ತ ದೇಸಾಯಿ, ಡಾ.ಅರವಿಂದ ಮಾಲಗತ್ತಿ, ಪ್ರೊ.ದೊಡ್ಡ ರಂಗೇಗೌಡ ಮುಂತಾದ ಸಾಹಿತಿಗಳು ಚುಟುಕು ಸಾಹಿತ್ಯದ ಮೂಲಕವೇ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಆದ್ದರಿಂದ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯವರು ಕೂಡಲೇ ಈ ಲೋಪವನ್ನು ಸರಿಪಡಿಸಿಕೊಂಡು ಚುಟುಕು ಸಾಹಿತ್ಯದ ಪುಸ್ತಕಗಳನ್ನೂ ಆಯ್ಕೆ ಮಾಡಬೇಕಿದೆ.

-ಅಹಲ್ಯಾ.ಸಿ.ನಾ.ಚಂದ್ರ, ಜನತಾ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

2 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

6 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

6 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

7 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

7 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

7 hours ago