ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯು 2024ನೇ ಸಾಲಿಗೆ ಒಂದೇ ಒಂದು ಚುಟುಕು ಸಾಹಿತ್ಯದ ಪುಸ್ತಕವನ್ನೂ ಆಯ್ಕೆ ಮಾಡದಿರುವುದು ಚುಟುಕು ಸಾಹಿತಿಗಳಿಗೆ ಬೇಸರ ಮೂಡಿಸಿದೆ.
ಚುಟುಕು ಸಾಹಿತ್ಯ ಬದುಕಿಗೆ ಲಾಲಿತ್ಯ ಪೋಷಣೆಗಳನ್ನು ನೀಡುವ ಜತೆಗೆ ಆಸಕ್ತಿ ಅಭಿಮಾನಿಗಳನ್ನೂ ಹೊಂದಿದೆ. ಆದರೆ ಪುಸ್ತಕಗಳ ಆಯ್ಕೆ ಸಮಿತಿಯವರು ಚುಟುಕು ಸಾಹಿತ್ಯದ ಪುಸ್ತಕಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿರುವುದು ಸರಿಯಲ್ಲ. 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಚುಟುಕು ರತ್ನ ಸಿಪಿಕೆಯವರು ಚುಟುಕು ಸಾಹಿತ್ಯ ಮನುಕುಲದ ಅಧಿಕಾವ್ಯ ಎಂದು ವರ್ಣಿಸಿ ಗ್ರಂಥ ರಚಿಸಿದ್ದಾರೆ.
ದೇಜಗೌ, ಚನ್ನವೀರ ಕಣವಿ, ಚಿದಾನಂದ ಗೌಡ, ನ್ಯಾಯಮೂರ್ತಿ ಜಿನದತ್ತ ದೇಸಾಯಿ, ಡಾ.ಅರವಿಂದ ಮಾಲಗತ್ತಿ, ಪ್ರೊ.ದೊಡ್ಡ ರಂಗೇಗೌಡ ಮುಂತಾದ ಸಾಹಿತಿಗಳು ಚುಟುಕು ಸಾಹಿತ್ಯದ ಮೂಲಕವೇ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಆದ್ದರಿಂದ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯವರು ಕೂಡಲೇ ಈ ಲೋಪವನ್ನು ಸರಿಪಡಿಸಿಕೊಂಡು ಚುಟುಕು ಸಾಹಿತ್ಯದ ಪುಸ್ತಕಗಳನ್ನೂ ಆಯ್ಕೆ ಮಾಡಬೇಕಿದೆ.
-ಅಹಲ್ಯಾ.ಸಿ.ನಾ.ಚಂದ್ರ, ಜನತಾ ನಗರ, ಮೈಸೂರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…