Andolana originals

ಓದುಗರ ಪತ್ರ: ಪುಸ್ತಕಗಳ ಆಯ್ಕೆಯಲ್ಲಿ ಮಲತಾಯಿ ಧೋರಣೆ ಏಕೆ?

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯು 2024ನೇ ಸಾಲಿಗೆ ಒಂದೇ ಒಂದು ಚುಟುಕು ಸಾಹಿತ್ಯದ ಪುಸ್ತಕವನ್ನೂ ಆಯ್ಕೆ ಮಾಡದಿರುವುದು ಚುಟುಕು ಸಾಹಿತಿಗಳಿಗೆ ಬೇಸರ ಮೂಡಿಸಿದೆ.

ಚುಟುಕು ಸಾಹಿತ್ಯ ಬದುಕಿಗೆ ಲಾಲಿತ್ಯ ಪೋಷಣೆಗಳನ್ನು ನೀಡುವ ಜತೆಗೆ ಆಸಕ್ತಿ ಅಭಿಮಾನಿಗಳನ್ನೂ ಹೊಂದಿದೆ. ಆದರೆ ಪುಸ್ತಕಗಳ ಆಯ್ಕೆ ಸಮಿತಿಯವರು ಚುಟುಕು ಸಾಹಿತ್ಯದ ಪುಸ್ತಕಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿರುವುದು ಸರಿಯಲ್ಲ. 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಚುಟುಕು ರತ್ನ ಸಿಪಿಕೆಯವರು ಚುಟುಕು ಸಾಹಿತ್ಯ ಮನುಕುಲದ ಅಧಿಕಾವ್ಯ ಎಂದು ವರ್ಣಿಸಿ ಗ್ರಂಥ ರಚಿಸಿದ್ದಾರೆ.

ದೇಜಗೌ, ಚನ್ನವೀರ ಕಣವಿ, ಚಿದಾನಂದ ಗೌಡ, ನ್ಯಾಯಮೂರ್ತಿ ಜಿನದತ್ತ ದೇಸಾಯಿ, ಡಾ.ಅರವಿಂದ ಮಾಲಗತ್ತಿ, ಪ್ರೊ.ದೊಡ್ಡ ರಂಗೇಗೌಡ ಮುಂತಾದ ಸಾಹಿತಿಗಳು ಚುಟುಕು ಸಾಹಿತ್ಯದ ಮೂಲಕವೇ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಆದ್ದರಿಂದ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯವರು ಕೂಡಲೇ ಈ ಲೋಪವನ್ನು ಸರಿಪಡಿಸಿಕೊಂಡು ಚುಟುಕು ಸಾಹಿತ್ಯದ ಪುಸ್ತಕಗಳನ್ನೂ ಆಯ್ಕೆ ಮಾಡಬೇಕಿದೆ.

-ಅಹಲ್ಯಾ.ಸಿ.ನಾ.ಚಂದ್ರ, ಜನತಾ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

11 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

11 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

11 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

11 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

23 hours ago