ಓದುಗರ ಪತ್ರ
ಮೈಸೂರು ಸಂಸ್ಥಾನ ದಕ್ಷಿಣ ಭಾರತದಲ್ಲಿ ೧೩೯೯ ರಿಂದ ೧೯೪೭ ರವರೆಗೆ ಸುದೀರ್ಘ ಆಡಳಿತ ನಡೆಸಿ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಮೈಸೂರು ದಸರಾ ಹಾಗೂ ಜಂಬೂಸವಾರಿ ಈ ಸಂಸ್ಥಾನದ ವಿಶೇಷತೆಯಾಗಿದ್ದು, ರಾಜರ ಆಡಳಿತ ಅಂತ್ಯವಾದರೂ ಸರ್ಕಾರದಿಂದಲೇ ದಸರಾ ಮಹೋತ್ಸವ ಹಾಗೂ ಜಂಬೂ ಸವಾರಿ ಇಂದಿಗೂ ನಡೆಯುತ್ತಿದ್ದು, ನಾಡಹಬ್ಬವಾಗಿ ಗಮನ ಸೆಳೆಯುತ್ತಿದೆ.
ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರುಗಳಾದ ಯದುರಾಯರು, ಹಿರಿಯ ಬೆಟ್ಟದ ಚಾಮರಾಜ ಒಡೆಯರ್, ತಿಮ್ಮರಾಜ ಒಡೆಯರ್ , ಹಿರಿಯ ಚಾಮರಾಜ ಒಡೆಯರ್ , ಇಮ್ಮಡಿ ಹಿರಿಯ ಬೆಟ್ಟದ ಚಾಮರಾಜ ಒಡೆಯರ್ , ತಿಮ್ಮರಾಜ ಒಡೆಯರ್ (ಅಪ್ಪಣ್ಣ),ಬೋಳ ಚಾಮರಾಜ ಒಡೆಯರ್, ಬೆಟ್ಟದ ಚಾಮರಾಜ ಒಡೆಯರ್ ,ರಾಜ ಒಡೆಯರ್, ಚಾಮರಾಜ ಒಡೆಯರ್, ಇಮ್ಮಡಿ ರಾಜ ಒಡೆಯರ್ ,ರಣಧಿರ ಕಂಠೀರವ ನರಸರಾಜ ಒಡೆಯರ್, ದೊಡ್ಡದೇವರಾಜ ಒಡೆಯರ್, ಚಿಕ್ಕ ದೇವರಾಜ ಒಡೆಯರ್, ಕಂಠೀರವ ಮಹಾರಾಜ ಒಡೆಯರ್, ದೊಡ್ಡ ದೇವರಾಜ ಒಡೆಯರ್, ಚಾಮರಾಜ ಒಡೆಯರ್, ಇಮ್ಮಡಿ ಕೃಷ್ಣರಾಜ ಒಡೆಯರ್, ನಂಜರಾಜ ಒಡೆಯರ್, ಬೆಟ್ಟದ ಚಾಮರಾಜ ಒಡೆಯರ್, ಖಾಸ ಚಾಮರಾಜ ಒಡೆಯರ್, ಮುಮ್ಮಡಿ ಕೃಷ್ಣರಾಜ ಒಡೆಯರ್, ಹತ್ತನೇ ಚಾಮರಾಜ ಒಡೆಯರ್ ಇನ್ನೂ ಮುಂತಾದ ರಾಜ ಮಹಾರಾಜರುಗಳ ಹೆಸರುಗಳು ಹಾಗೂ ಅವರ ಕೊಡುಗೆಗಳು ಬಹಳಷ್ಟು ಜನರಿಗೆ ಗೊತ್ತೇ ಇಲ್ಲ.
ಹಾಗಾಗಿ ಜಿಲ್ಲಾ ಆಡಳಿತ ದಸರಾ ಸಂದರ್ಭದಲ್ಲಾದರೂ ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಮೈಸೂರು ಸಂಸ್ಥಾನದ ರಾಜರುಗಳ ಸಂಕ್ಷಿಪ್ತ ಕಿರು ಪರಿಚಯದೊಂದಿಗೆ ಅವರ ಭಾವಚಿತ್ರಗಳನ್ನು ಅಳವಡಿಸಲಿ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ , ಮೈಸೂರು
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…