Andolana originals

ಓದುಗರ ಪತ್ರ:  ಮೈಸೂರು ಸಂಸ್ಥಾನದ ಅರಸರ ಸಂಕ್ಷಿಪ್ತ ಕಿರುಪರಿಚಯ ಅಳವಡಿಸಿ

ಮೈಸೂರು ಸಂಸ್ಥಾನ ದಕ್ಷಿಣ ಭಾರತದಲ್ಲಿ ೧೩೯೯ ರಿಂದ ೧೯೪೭ ರವರೆಗೆ ಸುದೀರ್ಘ ಆಡಳಿತ ನಡೆಸಿ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಮೈಸೂರು ದಸರಾ ಹಾಗೂ ಜಂಬೂಸವಾರಿ ಈ ಸಂಸ್ಥಾನದ ವಿಶೇಷತೆಯಾಗಿದ್ದು, ರಾಜರ ಆಡಳಿತ ಅಂತ್ಯವಾದರೂ ಸರ್ಕಾರದಿಂದಲೇ ದಸರಾ ಮಹೋತ್ಸವ ಹಾಗೂ ಜಂಬೂ ಸವಾರಿ ಇಂದಿಗೂ ನಡೆಯುತ್ತಿದ್ದು, ನಾಡಹಬ್ಬವಾಗಿ ಗಮನ ಸೆಳೆಯುತ್ತಿದೆ.

ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರುಗಳಾದ ಯದುರಾಯರು, ಹಿರಿಯ ಬೆಟ್ಟದ ಚಾಮರಾಜ ಒಡೆಯರ್, ತಿಮ್ಮರಾಜ ಒಡೆಯರ್ , ಹಿರಿಯ ಚಾಮರಾಜ ಒಡೆಯರ್ , ಇಮ್ಮಡಿ ಹಿರಿಯ ಬೆಟ್ಟದ ಚಾಮರಾಜ ಒಡೆಯರ್ , ತಿಮ್ಮರಾಜ ಒಡೆಯರ್ (ಅಪ್ಪಣ್ಣ),ಬೋಳ ಚಾಮರಾಜ ಒಡೆಯರ್, ಬೆಟ್ಟದ ಚಾಮರಾಜ ಒಡೆಯರ್ ,ರಾಜ ಒಡೆಯರ್, ಚಾಮರಾಜ ಒಡೆಯರ್, ಇಮ್ಮಡಿ ರಾಜ ಒಡೆಯರ್ ,ರಣಧಿರ ಕಂಠೀರವ ನರಸರಾಜ ಒಡೆಯರ್, ದೊಡ್ಡದೇವರಾಜ ಒಡೆಯರ್, ಚಿಕ್ಕ ದೇವರಾಜ ಒಡೆಯರ್, ಕಂಠೀರವ ಮಹಾರಾಜ ಒಡೆಯರ್, ದೊಡ್ಡ ದೇವರಾಜ ಒಡೆಯರ್, ಚಾಮರಾಜ ಒಡೆಯರ್, ಇಮ್ಮಡಿ ಕೃಷ್ಣರಾಜ ಒಡೆಯರ್, ನಂಜರಾಜ ಒಡೆಯರ್, ಬೆಟ್ಟದ ಚಾಮರಾಜ ಒಡೆಯರ್, ಖಾಸ ಚಾಮರಾಜ ಒಡೆಯರ್, ಮುಮ್ಮಡಿ ಕೃಷ್ಣರಾಜ ಒಡೆಯರ್, ಹತ್ತನೇ ಚಾಮರಾಜ ಒಡೆಯರ್ ಇನ್ನೂ ಮುಂತಾದ ರಾಜ ಮಹಾರಾಜರುಗಳ ಹೆಸರುಗಳು ಹಾಗೂ ಅವರ ಕೊಡುಗೆಗಳು ಬಹಳಷ್ಟು ಜನರಿಗೆ ಗೊತ್ತೇ ಇಲ್ಲ.

ಹಾಗಾಗಿ ಜಿಲ್ಲಾ ಆಡಳಿತ ದಸರಾ ಸಂದರ್ಭದಲ್ಲಾದರೂ ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಮೈಸೂರು ಸಂಸ್ಥಾನದ ರಾಜರುಗಳ ಸಂಕ್ಷಿಪ್ತ ಕಿರು ಪರಿಚಯದೊಂದಿಗೆ ಅವರ ಭಾವಚಿತ್ರಗಳನ್ನು ಅಳವಡಿಸಲಿ.

 – ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ , ಮೈಸೂರು

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

1 hour ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

2 hours ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

2 hours ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

2 hours ago