ಓದುಗರ ಪತ್ರ
ಮೈಸೂರು ಸಂಸ್ಥಾನ ದಕ್ಷಿಣ ಭಾರತದಲ್ಲಿ ೧೩೯೯ ರಿಂದ ೧೯೪೭ ರವರೆಗೆ ಸುದೀರ್ಘ ಆಡಳಿತ ನಡೆಸಿ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಮೈಸೂರು ದಸರಾ ಹಾಗೂ ಜಂಬೂಸವಾರಿ ಈ ಸಂಸ್ಥಾನದ ವಿಶೇಷತೆಯಾಗಿದ್ದು, ರಾಜರ ಆಡಳಿತ ಅಂತ್ಯವಾದರೂ ಸರ್ಕಾರದಿಂದಲೇ ದಸರಾ ಮಹೋತ್ಸವ ಹಾಗೂ ಜಂಬೂ ಸವಾರಿ ಇಂದಿಗೂ ನಡೆಯುತ್ತಿದ್ದು, ನಾಡಹಬ್ಬವಾಗಿ ಗಮನ ಸೆಳೆಯುತ್ತಿದೆ.
ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರುಗಳಾದ ಯದುರಾಯರು, ಹಿರಿಯ ಬೆಟ್ಟದ ಚಾಮರಾಜ ಒಡೆಯರ್, ತಿಮ್ಮರಾಜ ಒಡೆಯರ್ , ಹಿರಿಯ ಚಾಮರಾಜ ಒಡೆಯರ್ , ಇಮ್ಮಡಿ ಹಿರಿಯ ಬೆಟ್ಟದ ಚಾಮರಾಜ ಒಡೆಯರ್ , ತಿಮ್ಮರಾಜ ಒಡೆಯರ್ (ಅಪ್ಪಣ್ಣ),ಬೋಳ ಚಾಮರಾಜ ಒಡೆಯರ್, ಬೆಟ್ಟದ ಚಾಮರಾಜ ಒಡೆಯರ್ ,ರಾಜ ಒಡೆಯರ್, ಚಾಮರಾಜ ಒಡೆಯರ್, ಇಮ್ಮಡಿ ರಾಜ ಒಡೆಯರ್ ,ರಣಧಿರ ಕಂಠೀರವ ನರಸರಾಜ ಒಡೆಯರ್, ದೊಡ್ಡದೇವರಾಜ ಒಡೆಯರ್, ಚಿಕ್ಕ ದೇವರಾಜ ಒಡೆಯರ್, ಕಂಠೀರವ ಮಹಾರಾಜ ಒಡೆಯರ್, ದೊಡ್ಡ ದೇವರಾಜ ಒಡೆಯರ್, ಚಾಮರಾಜ ಒಡೆಯರ್, ಇಮ್ಮಡಿ ಕೃಷ್ಣರಾಜ ಒಡೆಯರ್, ನಂಜರಾಜ ಒಡೆಯರ್, ಬೆಟ್ಟದ ಚಾಮರಾಜ ಒಡೆಯರ್, ಖಾಸ ಚಾಮರಾಜ ಒಡೆಯರ್, ಮುಮ್ಮಡಿ ಕೃಷ್ಣರಾಜ ಒಡೆಯರ್, ಹತ್ತನೇ ಚಾಮರಾಜ ಒಡೆಯರ್ ಇನ್ನೂ ಮುಂತಾದ ರಾಜ ಮಹಾರಾಜರುಗಳ ಹೆಸರುಗಳು ಹಾಗೂ ಅವರ ಕೊಡುಗೆಗಳು ಬಹಳಷ್ಟು ಜನರಿಗೆ ಗೊತ್ತೇ ಇಲ್ಲ.
ಹಾಗಾಗಿ ಜಿಲ್ಲಾ ಆಡಳಿತ ದಸರಾ ಸಂದರ್ಭದಲ್ಲಾದರೂ ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಮೈಸೂರು ಸಂಸ್ಥಾನದ ರಾಜರುಗಳ ಸಂಕ್ಷಿಪ್ತ ಕಿರು ಪರಿಚಯದೊಂದಿಗೆ ಅವರ ಭಾವಚಿತ್ರಗಳನ್ನು ಅಳವಡಿಸಲಿ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ , ಮೈಸೂರು
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…