ಓದುಗರ ಪತ್ರ
ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ‘ಯುವದಸರಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸಿದ್ದ ಸುಮಾರು 500 ಕಾಲೇಜುಗಳ ನೃತ್ಯ ತಂಡಗಳ ಪೈಕಿ ಕೇವಲ 12 ನೃತ್ಯ ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ತಂಡಗಳನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಯಿತು. ಎಂಬುದರ ಬಗ್ಗೆ ಯುವ ದಸರಾ ಆಯೋಜಕರು ತಿಳಿಸಬೇಕು. ಶೇ.5ರಷ್ಟೂ ಕಾಲೇಜುಗಳನ್ನು ಆಯ್ಕೆ ಮಾಡಿಲ್ಲ ಎಂದರೆ ಆಯ್ಕೆಯ ಮಾನದಂಡ ಏನು? ಆಯ್ಕೆ ಸಮಿತಿಯ ಈ ನಿರ್ಧಾರದಿಂದಾಗಿ ಯುವ ದಸರಾದಂತಹ ದೊಡ್ಡ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂಬ ಆಸೆ ಹೊಂದಿದ್ದ ನೂರಾರು ಗ್ರಾಮೀಣ ಪ್ರತಿಭೆಗಳಿಗೆ ನಿರಾಸೆಯಾಗಿದೆ. ಅದರಲ್ಲಿ ನಾನೂ ಒಬ್ಬಳು. ನನ್ನಂತಹ ಅನೇಕ ಕಲಾವಿದರಿಗೆ ಯುವ ಸಂಭ್ರಮ,, ಯುವ ದಸರಾದಂತಹ ಕಾರ್ಯಕ್ರಮಗಳ ವೇದಿಕೆ ಹತ್ತಬೇಕು ಎಂಬ ದೊಡ್ಡ ಕನಸಿರುತ್ತದೆ. ಆದರೆ ಆಯೋಜಕರು ಇದ್ಯಾವುದಕ್ಕೂ ಮಣೆಹಾಕದ ತಮ್ಮಿಚ್ಛೆಯಂತೆ ಆಯ್ಕೆ ಮಾಡುತ್ತಿದ್ದಾರೆ. ದೊಡ್ಡ ಕಾರ್ಯಕ್ರಮ ಆದ್ದರಿಂದ ದೊಡ್ಡ ದೊಡ್ಡ ಕಲಾವಿದರಿಗೆ ಲಕ್ಷಾಂತರ ರೂ ನೀಡಿ ಅವರನ್ನು ಆಹ್ವಾನಿಸಬೇಕು ನಿಜ. ಆದರೆ ಇದರ ಜತೆಗೆ ಶೇ.10ರಷ್ಟು ಕಾರ್ಯಕ್ರಮಗಳನ್ನು ಸ್ಥಳೀಯ ಪ್ರತಿಭೆಗಳಿಗೆ ನೀಡಬೇಕಲ್ಲವೇ? ಒಟ್ಟಾರೆ ಈ ಬಾರಿಯ ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳು ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ವಿಫಲವಾಗಿದೆ ಅನಿಸುತ್ತದೆ.
-ಟಿ.ಎನ್.ಶ್ರುತಿ, ಅವಕಾಶ ವಂಚಿತ ಕಲಾವಿದೆ, ಮೈಸೂರು,
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…