Andolana originals

ಓದುಗರ ಪತ್ರ: ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡಿ

ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ‘ಯುವದಸರಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸಿದ್ದ ಸುಮಾರು 500 ಕಾಲೇಜುಗಳ ನೃತ್ಯ ತಂಡಗಳ ಪೈಕಿ ಕೇವಲ 12 ನೃತ್ಯ ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ತಂಡಗಳನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಯಿತು. ಎಂಬುದರ ಬಗ್ಗೆ ಯುವ ದಸರಾ ಆಯೋಜಕರು ತಿಳಿಸಬೇಕು. ಶೇ.5ರಷ್ಟೂ ಕಾಲೇಜುಗಳನ್ನು ಆಯ್ಕೆ ಮಾಡಿಲ್ಲ ಎಂದರೆ ಆಯ್ಕೆಯ ಮಾನದಂಡ ಏನು? ಆಯ್ಕೆ ಸಮಿತಿಯ ಈ ನಿರ್ಧಾರದಿಂದಾಗಿ ಯುವ ದಸರಾದಂತಹ ದೊಡ್ಡ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂಬ ಆಸೆ ಹೊಂದಿದ್ದ ನೂರಾರು ಗ್ರಾಮೀಣ ಪ್ರತಿಭೆಗಳಿಗೆ ನಿರಾಸೆಯಾಗಿದೆ. ಅದರಲ್ಲಿ ನಾನೂ ಒಬ್ಬಳು. ನನ್ನಂತಹ ಅನೇಕ ಕಲಾವಿದರಿಗೆ ಯುವ ಸಂಭ್ರಮ,, ಯುವ ದಸರಾದಂತಹ ಕಾರ್ಯಕ್ರಮಗಳ ವೇದಿಕೆ ಹತ್ತಬೇಕು ಎಂಬ ದೊಡ್ಡ ಕನಸಿರುತ್ತದೆ. ಆದರೆ ಆಯೋಜಕರು ಇದ್ಯಾವುದಕ್ಕೂ ಮಣೆಹಾಕದ ತಮ್ಮಿಚ್ಛೆಯಂತೆ ಆಯ್ಕೆ ಮಾಡುತ್ತಿದ್ದಾರೆ. ದೊಡ್ಡ ಕಾರ್ಯಕ್ರಮ ಆದ್ದರಿಂದ ದೊಡ್ಡ ದೊಡ್ಡ ಕಲಾವಿದರಿಗೆ ಲಕ್ಷಾಂತರ ರೂ ನೀಡಿ ಅವರನ್ನು ಆಹ್ವಾನಿಸಬೇಕು ನಿಜ. ಆದರೆ ಇದರ ಜತೆಗೆ ಶೇ.10ರಷ್ಟು ಕಾರ್ಯಕ್ರಮಗಳನ್ನು ಸ್ಥಳೀಯ ಪ್ರತಿಭೆಗಳಿಗೆ ನೀಡಬೇಕಲ್ಲವೇ? ಒಟ್ಟಾರೆ ಈ ಬಾರಿಯ ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳು ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ವಿಫಲವಾಗಿದೆ ಅನಿಸುತ್ತದೆ.

-ಟಿ.ಎನ್.ಶ್ರುತಿ, ಅವಕಾಶ ವಂಚಿತ ಕಲಾವಿದೆ, ಮೈಸೂರು,

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

50 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago