ಓದುಗರ ಪತ್ರ
ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಈ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುವಂತೆ ಪಕ್ಷಿಗಳು, ಪ್ರಾಣಿಗಳು ಹಾಗೂ ಮಹನೀಯರ ಕಲಾಕೃತಿಗಳನ್ನು ನಿರ್ಮಿಸಲಾಗಿದ್ದು, ಇದಕ್ಕಾಗಿ ಹಲವು ಬಗೆಯ ೧೨ ಲಕ್ಷಕ್ಕೂ ಅಽಕ ಹೂಗಳನ್ನು ಬಳಸಲಾಗಿದೆ. ಸುಮಾರು ೨೫ ಸಾವಿರ ಕುಂಡಗಳಲ್ಲಿ ಬಣ್ಣ ಬಣ್ಣದ ಹೂವುಗಳು ನಳನಳಿಸುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿವೆ. ಡೇಲಿಯ, ಸೇವಂತಿಗೆ, ಕಾಶಿಗೊಂಡೆ, ಸಿಲ್ವಿಯ ಮುಂತಾದ ವೈವಿಧ್ಯಮಯ ಗಿಡಗಳಿವೆ. ಹೂವನ್ನು ಬಳಸಿ ನಿರ್ಮಿಸಿರುವ ನವಿಲುಗಳು ಪ್ರವಾಸಿಗರಿಗೆ ಸ್ವಾಗತ ಕೋರುತ್ತಿರುವುದು ಮನಸೂರೆಗೊಳಿಸುತ್ತದೆ. ಅಲ್ಲದೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಅಕ್ಷರಧಾಮ, ಕಾರ್ಗಿಲ್ ಯುದ್ಧದ ಸ್ಮಾರಕ, ಪಂಚ ಗ್ಯಾರಂಟಿ ಯೋಜನೆಗಳು, ಮುಮ್ಮಡಿ ಕೃಷ್ಣರಾಜ ಒಡೆಯರ್, ಸಂವಿಧಾನದ ಪೀಠಿಕೆ, ಗಂಡ ಭೇರುಂಡ, ಆಮೆ, ಹದ್ದು ಹೀಗೆ ಇನ್ನೂ ಅನೇಕ ಆಕೃತಿಗಳು ಹೂವುಗಳಲ್ಲಿ ಮೂಡಿಬಂದಿದ್ದು, ಅತ್ಯಾಕರ್ಷಣೀಯವಾಗಿವೆ. ಪ್ರವಾಸಿಗರಿಗೆ ಅವುಗಳೊಂದಿಗೆ ಫೋಟೋ ತೆಗೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ರಾತ್ರಿಯ ವೇಳೆ ವಿದ್ಯುತ್ ದೀಪಾಲಂಕಾರವೂ ಇರುವುದರಿಂದ ಫಲಪುಷ್ಪ ಪ್ರದರ್ಶನವು ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…