Andolana originals

ಓದುಗರ ಪತ್ರ: ಪ್ರವಾಸಿಗರನ್ನು ಸೆಳೆದ ಫಲಪುಷ್ಪ ಪ್ರದರ್ಶನ

ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಈ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುವಂತೆ ಪಕ್ಷಿಗಳು, ಪ್ರಾಣಿಗಳು ಹಾಗೂ ಮಹನೀಯರ ಕಲಾಕೃತಿಗಳನ್ನು ನಿರ್ಮಿಸಲಾಗಿದ್ದು, ಇದಕ್ಕಾಗಿ ಹಲವು ಬಗೆಯ ೧೨ ಲಕ್ಷಕ್ಕೂ ಅಽಕ ಹೂಗಳನ್ನು ಬಳಸಲಾಗಿದೆ. ಸುಮಾರು ೨೫ ಸಾವಿರ ಕುಂಡಗಳಲ್ಲಿ ಬಣ್ಣ ಬಣ್ಣದ ಹೂವುಗಳು ನಳನಳಿಸುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿವೆ. ಡೇಲಿಯ, ಸೇವಂತಿಗೆ, ಕಾಶಿಗೊಂಡೆ, ಸಿಲ್ವಿಯ ಮುಂತಾದ ವೈವಿಧ್ಯಮಯ ಗಿಡಗಳಿವೆ. ಹೂವನ್ನು ಬಳಸಿ ನಿರ್ಮಿಸಿರುವ ನವಿಲುಗಳು ಪ್ರವಾಸಿಗರಿಗೆ ಸ್ವಾಗತ ಕೋರುತ್ತಿರುವುದು ಮನಸೂರೆಗೊಳಿಸುತ್ತದೆ. ಅಲ್ಲದೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಅಕ್ಷರಧಾಮ, ಕಾರ್ಗಿಲ್ ಯುದ್ಧದ ಸ್ಮಾರಕ, ಪಂಚ ಗ್ಯಾರಂಟಿ ಯೋಜನೆಗಳು, ಮುಮ್ಮಡಿ ಕೃಷ್ಣರಾಜ ಒಡೆಯರ್, ಸಂವಿಧಾನದ ಪೀಠಿಕೆ, ಗಂಡ ಭೇರುಂಡ, ಆಮೆ, ಹದ್ದು ಹೀಗೆ ಇನ್ನೂ ಅನೇಕ ಆಕೃತಿಗಳು ಹೂವುಗಳಲ್ಲಿ ಮೂಡಿಬಂದಿದ್ದು, ಅತ್ಯಾಕರ್ಷಣೀಯವಾಗಿವೆ. ಪ್ರವಾಸಿಗರಿಗೆ ಅವುಗಳೊಂದಿಗೆ ಫೋಟೋ ತೆಗೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ರಾತ್ರಿಯ ವೇಳೆ ವಿದ್ಯುತ್ ದೀಪಾಲಂಕಾರವೂ ಇರುವುದರಿಂದ ಫಲಪುಷ್ಪ ಪ್ರದರ್ಶನವು ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago