ಓದುಗರ ಪತ್ರ
ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಈ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುವಂತೆ ಪಕ್ಷಿಗಳು, ಪ್ರಾಣಿಗಳು ಹಾಗೂ ಮಹನೀಯರ ಕಲಾಕೃತಿಗಳನ್ನು ನಿರ್ಮಿಸಲಾಗಿದ್ದು, ಇದಕ್ಕಾಗಿ ಹಲವು ಬಗೆಯ ೧೨ ಲಕ್ಷಕ್ಕೂ ಅಽಕ ಹೂಗಳನ್ನು ಬಳಸಲಾಗಿದೆ. ಸುಮಾರು ೨೫ ಸಾವಿರ ಕುಂಡಗಳಲ್ಲಿ ಬಣ್ಣ ಬಣ್ಣದ ಹೂವುಗಳು ನಳನಳಿಸುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿವೆ. ಡೇಲಿಯ, ಸೇವಂತಿಗೆ, ಕಾಶಿಗೊಂಡೆ, ಸಿಲ್ವಿಯ ಮುಂತಾದ ವೈವಿಧ್ಯಮಯ ಗಿಡಗಳಿವೆ. ಹೂವನ್ನು ಬಳಸಿ ನಿರ್ಮಿಸಿರುವ ನವಿಲುಗಳು ಪ್ರವಾಸಿಗರಿಗೆ ಸ್ವಾಗತ ಕೋರುತ್ತಿರುವುದು ಮನಸೂರೆಗೊಳಿಸುತ್ತದೆ. ಅಲ್ಲದೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಅಕ್ಷರಧಾಮ, ಕಾರ್ಗಿಲ್ ಯುದ್ಧದ ಸ್ಮಾರಕ, ಪಂಚ ಗ್ಯಾರಂಟಿ ಯೋಜನೆಗಳು, ಮುಮ್ಮಡಿ ಕೃಷ್ಣರಾಜ ಒಡೆಯರ್, ಸಂವಿಧಾನದ ಪೀಠಿಕೆ, ಗಂಡ ಭೇರುಂಡ, ಆಮೆ, ಹದ್ದು ಹೀಗೆ ಇನ್ನೂ ಅನೇಕ ಆಕೃತಿಗಳು ಹೂವುಗಳಲ್ಲಿ ಮೂಡಿಬಂದಿದ್ದು, ಅತ್ಯಾಕರ್ಷಣೀಯವಾಗಿವೆ. ಪ್ರವಾಸಿಗರಿಗೆ ಅವುಗಳೊಂದಿಗೆ ಫೋಟೋ ತೆಗೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ರಾತ್ರಿಯ ವೇಳೆ ವಿದ್ಯುತ್ ದೀಪಾಲಂಕಾರವೂ ಇರುವುದರಿಂದ ಫಲಪುಷ್ಪ ಪ್ರದರ್ಶನವು ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…