ಓದುಗರ ಪತ್ರ
ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್ ಇಂದಿನ ಕಲುಷಿತ ರಾಜಕೀಯ ವ್ಯವಸ್ಥೆಯಲ್ಲೂ ತಮ್ಮತನ ಮೆರೆದಿದ್ದರು. ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಇವರು, ತಾವು ಸಚಿವರೆಂಬ ಯಾವುದೇ ರೀತಿಯ ಹಮ್ಮ ಬಿಮ್ಮು ತೋರದೆ ಜನ ಸಾಮಾನ್ಯರಲ್ಲಿ ಒಬ್ಬರ ಹಾಗೆ ಬಸ್ಸು ಹಾಗೂ ರೈಲುಗಳಲ್ಲಿ ಪ್ರಯಾಣ ಮಾಡುತ್ತಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯ ನಿರ್ವಹಿಸಿ, ಮಾದರಿ ಸಚಿವರಾಗಿದ್ದರು. ಮೌಲ್ಯ ಹಾಗೂ ಧ್ಯೇಯನಿಷ್ಠ ರಾಜಕಾರಣಿಯ ನಿಧನ ಖಂಡಿತವಾಗಿಯೂ ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟವೆಂದೇ ಹೇಳಬಹುದು.
-ಕೆ.ವಿ.ವಾಸು, ಮೈಸೂರು
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ…
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…