ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ ಎಂದೂ ಗುರುತಿಸಲಾಗಿದೆ. ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಈಗ ಶಾಲೆ ಇರುವ ಜಾಗದಲ್ಲಿ ಸೇನಾಪಡೆಯ ವಾಸ್ತವ್ಯಕ್ಕೆ ಸ್ಥಳಾವಕಾಶ ಕಲ್ಪಿಸಲಾಗಿತ್ತು ಎನ್ನಲಾಗಿದೆ. ಇಂತಹ ಶಾಲೆಯ ಗೇಟಿನ ಮುಂಭಾಗದಲ್ಲಿ ಪ್ರತಿದಿನ ಬೆಳಿಗ್ಗೆ ಹೊತ್ತು ಒಂದು ಗುಡ್ಡೆ ಕಸ ಬಿದ್ದಿರುತ್ತದೆ.
ಈ ಕಸದ ಮೂಲ ಸಮೀಪದ ಅಂಗಡಿಗಳು ಅಥವಾ ಮನೆಯವರು ಇರಬಹುದು. ಆದರೆ, ಪ್ರತಿದಿನ ಬೆಳಿಗ್ಗೆ ನಗರಸಭೆಯ ಸ್ವಚ್ಛತಾ ಕಾರ್ಯ ವಾಹನ ಕಸ ಸಂಗ್ರಹಣೆಗಾಗಿ ಸಂಚರಿಸುತ್ತದೆ. ಆ ವಾಹನಕ್ಕೆ ಕಸ ನೀಡಬಹುದು. ಆದರೆ, ಶಾಲೆಯ ಮುಂದೆ ಕಸ ಹಾಕುವುದು ಸರಿಯೇ? ಪ್ರತಿದಿನ ಹೀಗೆ ಶಾಲೆಯ ಗೇಟ್ನ ಮುಂದೆ ಬೀಳುವ ಕಸದ ಗುಡ್ಡೆಯನ್ನು ನಗರಸಭೆ ಸ್ವಚ್ಛತಾಗಾರರು ತೆರವುಗೊಳಿಸುತ್ತಾರೆ. ಆದರೆ, ಶನಿವಾರ ಶಾಲೆಗೆ ಬೆಳಿಗ್ಗೆ ೭.೩೦ರ ಅಂದಾಜು ವೇಳೆಗೆ ಬರುವ ಮಕ್ಕಳು ಮತ್ತು ಶಿಕ್ಷಕರಿಗೆ ಕಸದ ಗುಡ್ಡೆ ಕಣ್ಣಿಗೆ ರಾಚಿದರೆ, ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಇದು ಈ ಕಸದ ವಾರಸುದಾರರಿಗೆ ಅರ್ಥವಾಗುತ್ತಿಲ್ಲವೇ?
ಸಾರ್ವಜನಿಕರು ಸಹಕರಿಸದಿದ್ದರೆ ನಗರದ ಸ್ವಚ್ಛತೆ ಮತ್ತು ಸೌಂದರ್ಯವನ್ನು ಕಾಪಾಡುವುದು ಕಷ್ಟ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತು, ಈ ಕಸದ ಸಮಸ್ಯೆಯನ್ನು ಬಗೆಹರಿಸಬೇಕು.
-ಮನೋಜ್ಕುಮಾರ್, ನಂಜನಗೂಡು
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…