ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ ಎಂದೂ ಗುರುತಿಸಲಾಗಿದೆ. ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಈಗ ಶಾಲೆ ಇರುವ ಜಾಗದಲ್ಲಿ ಸೇನಾಪಡೆಯ ವಾಸ್ತವ್ಯಕ್ಕೆ ಸ್ಥಳಾವಕಾಶ ಕಲ್ಪಿಸಲಾಗಿತ್ತು ಎನ್ನಲಾಗಿದೆ. ಇಂತಹ ಶಾಲೆಯ ಗೇಟಿನ ಮುಂಭಾಗದಲ್ಲಿ ಪ್ರತಿದಿನ ಬೆಳಿಗ್ಗೆ ಹೊತ್ತು ಒಂದು ಗುಡ್ಡೆ ಕಸ ಬಿದ್ದಿರುತ್ತದೆ.
ಈ ಕಸದ ಮೂಲ ಸಮೀಪದ ಅಂಗಡಿಗಳು ಅಥವಾ ಮನೆಯವರು ಇರಬಹುದು. ಆದರೆ, ಪ್ರತಿದಿನ ಬೆಳಿಗ್ಗೆ ನಗರಸಭೆಯ ಸ್ವಚ್ಛತಾ ಕಾರ್ಯ ವಾಹನ ಕಸ ಸಂಗ್ರಹಣೆಗಾಗಿ ಸಂಚರಿಸುತ್ತದೆ. ಆ ವಾಹನಕ್ಕೆ ಕಸ ನೀಡಬಹುದು. ಆದರೆ, ಶಾಲೆಯ ಮುಂದೆ ಕಸ ಹಾಕುವುದು ಸರಿಯೇ? ಪ್ರತಿದಿನ ಹೀಗೆ ಶಾಲೆಯ ಗೇಟ್ನ ಮುಂದೆ ಬೀಳುವ ಕಸದ ಗುಡ್ಡೆಯನ್ನು ನಗರಸಭೆ ಸ್ವಚ್ಛತಾಗಾರರು ತೆರವುಗೊಳಿಸುತ್ತಾರೆ. ಆದರೆ, ಶನಿವಾರ ಶಾಲೆಗೆ ಬೆಳಿಗ್ಗೆ ೭.೩೦ರ ಅಂದಾಜು ವೇಳೆಗೆ ಬರುವ ಮಕ್ಕಳು ಮತ್ತು ಶಿಕ್ಷಕರಿಗೆ ಕಸದ ಗುಡ್ಡೆ ಕಣ್ಣಿಗೆ ರಾಚಿದರೆ, ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಇದು ಈ ಕಸದ ವಾರಸುದಾರರಿಗೆ ಅರ್ಥವಾಗುತ್ತಿಲ್ಲವೇ?
ಸಾರ್ವಜನಿಕರು ಸಹಕರಿಸದಿದ್ದರೆ ನಗರದ ಸ್ವಚ್ಛತೆ ಮತ್ತು ಸೌಂದರ್ಯವನ್ನು ಕಾಪಾಡುವುದು ಕಷ್ಟ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತು, ಈ ಕಸದ ಸಮಸ್ಯೆಯನ್ನು ಬಗೆಹರಿಸಬೇಕು.
-ಮನೋಜ್ಕುಮಾರ್, ನಂಜನಗೂಡು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…