ಮೈಸೂರಿನ ಪ್ರಮುಖ ರಸ್ತೆಗಳ ಫುಟ್ಪಾತ್ಗಳನ್ನು ಫಾಸ್ಟ್ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ರಸ್ತೆಗಳಲ್ಲಿ ಒಂದಾಗಿದೆ. ಆದರೆ ಇದರ ಮುಂಭಾಗದ ಫುಟ್ ಪಾತ್ ಅನ್ನು ಸಂಪೂರ್ಣವಾಗಿ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಜನಸಾಮಾನ್ಯರು ಓಡಾಡಲು ತೊಂದರೆಯಾಗುತ್ತಿದೆ. ಇಲ್ಲಿನ ಫಾಸ್ಟ್ ಫುಡ್ ಅಂಗಡಿಯವರು ಹೋಟೆಲ್ನ ತ್ಯಾಜ್ಯವನ್ನು ಇಲ್ಲಿಯೇ ಬೀಸಾಡುತ್ತಿದ್ದು, ಈ ಅನೈರ್ಮಲ್ಯದ ವಾತಾವರಣದಿಂದ ಎಲ್ಐಸಿ ಕಚೇರಿಗೆ ಬರುವ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ನಗರಪಾಲಿಕೆಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಕ್ರಮವಹಿಸಿ ಫುಟ್ ಪಾತ್ ಮೇಲಿನ ವ್ಯಾಪಾರಿಗಳನ್ನು ತೆರವುಗೊಳಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…