ಮೈಸೂರಿನ ಪ್ರಮುಖ ರಸ್ತೆಗಳ ಫುಟ್ಪಾತ್ಗಳನ್ನು ಫಾಸ್ಟ್ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ರಸ್ತೆಗಳಲ್ಲಿ ಒಂದಾಗಿದೆ. ಆದರೆ ಇದರ ಮುಂಭಾಗದ ಫುಟ್ ಪಾತ್ ಅನ್ನು ಸಂಪೂರ್ಣವಾಗಿ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಜನಸಾಮಾನ್ಯರು ಓಡಾಡಲು ತೊಂದರೆಯಾಗುತ್ತಿದೆ. ಇಲ್ಲಿನ ಫಾಸ್ಟ್ ಫುಡ್ ಅಂಗಡಿಯವರು ಹೋಟೆಲ್ನ ತ್ಯಾಜ್ಯವನ್ನು ಇಲ್ಲಿಯೇ ಬೀಸಾಡುತ್ತಿದ್ದು, ಈ ಅನೈರ್ಮಲ್ಯದ ವಾತಾವರಣದಿಂದ ಎಲ್ಐಸಿ ಕಚೇರಿಗೆ ಬರುವ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ನಗರಪಾಲಿಕೆಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಕ್ರಮವಹಿಸಿ ಫುಟ್ ಪಾತ್ ಮೇಲಿನ ವ್ಯಾಪಾರಿಗಳನ್ನು ತೆರವುಗೊಳಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…