ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ ಸಮಾಜಕ್ಕೆ, ತನ್ನ ದೃಷ್ಟಿ ಎಷ್ಟು ಮಸುಕಾಗಿದೆ ಎಂದು ನಿರೂಪಿಸುವ ರೀತಿಯಲ್ಲಿ ‘ಆಂದೋಲನ’ ದಿನಪತ್ರಿಕೆಯ ತಂಡ ಮಲೆ ಮಹದೇಶ್ವರ ಬೆಟ್ಟದ ಸುತ್ತಲಿನ ಕಗ್ಗಾಡುಗಳಲ್ಲಿರುವ ಕುಗ್ರಾಮಗಳ ಪರಿಚಯವನ್ನು ಮಾಡಿಕೊಟ್ಟಿರುವುದು ನಿಜಕ್ಕೂ ಅಭಿನಂದನಾರ್ಹ.
ಇಂಡಿಗನತ್ತ, ಮೆಂದಾರೆ, ದೊಡ್ಡಾಣೆ, ಕೊಕ್ಕಬೋರೆ, ತೋಕೆರೆ ಗ್ರಾಮಗಳ ಒಳಹೊಕ್ಕು, ಅಲ್ಲಿ ನಿಕೃಷ್ಟ ಬಾಳ್ವೆ ನಡೆಸುತ್ತಿರುವ ಅವಕಾಶ ವಂಚಿತ ಜನರನ್ನು ನಾಡಿನ ಜನತೆಗೆ ಪರಿಚಯಿಸುವ ಮೂಲಕ ‘ಆಂದೋಲನ’ ತಂಡ ನಾಗರಿಕ ಜಗತ್ತಿನ ಕಣ್ಣುಗಳಿಗೆ ಕವಿದಿದ್ದ ಪೊರೆಯನ್ನು ಕಳಚಿಹಾಕಿದೆ. ನಮ್ಮ ನಡುವೆಯೇ ಇಂತಹ ಗ್ರಾಮಗಳೂ ಇವೆಯೇ? ಎಂದು ಹುಬ್ಬೇರಿಸುವಂತೆ ವರದಿ ಮಾಡಲಾಗಿದೆ. ವರದಿಗಳಲ್ಲಿರುವ ಮಾನವೀಯ ಧ್ವನಿ ಮತ್ತು ಸಂವೇದನಾಶೀಲ ಅಕ್ಷರಗಳು ಆಳುವ ವರ್ಗಗಳನ್ನಷ್ಟೇ ಅಲ್ಲದೆ, ಈ ವರ್ಗಗಳನ್ನು ಮೆರೆಸುವ ಪ್ರಜ್ಞಾವಂತ ಸಮಾಜವನ್ನೂ ಎಚ್ಚರಿಸುವಂತಿವೆ. ಈ ವರದಿಗಾರಿಕೆ ಬಗ್ಗೆ ,ಆಂದೋಲನ’ದ ಬೆನ್ನುತಟ್ಟುವುದರೊಂದಿಗೇ, ನಮ್ಮ ಚುನಾಯಿತ ಪ್ರತಿನಿಧಿಗಳ ಎದೆಯ ಕದ ತಟ್ಟುವುದೂ ಅತ್ಯವಶ್ಯ ಎನ್ನುವುದನ್ನು ಈ ವರದಿಗಳು ನಿರೂಪಿಸಿವೆ. -ನಾ.ದಿವಾಕರ, ಮೈಸೂರು.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…