Andolana originals

ಓದುಗರ ಪತ್ರ: ಎಲ್ಲರ ಕಣ್ತೆರೆಸುವ ವರದಿ

ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ ಸಮಾಜಕ್ಕೆ, ತನ್ನ ದೃಷ್ಟಿ ಎಷ್ಟು ಮಸುಕಾಗಿದೆ ಎಂದು ನಿರೂಪಿಸುವ ರೀತಿಯಲ್ಲಿ ‘ಆಂದೋಲನ’ ದಿನಪತ್ರಿಕೆಯ ತಂಡ ಮಲೆ ಮಹದೇಶ್ವರ ಬೆಟ್ಟದ ಸುತ್ತಲಿನ ಕಗ್ಗಾಡುಗಳಲ್ಲಿರುವ ಕುಗ್ರಾಮಗಳ ಪರಿಚಯವನ್ನು ಮಾಡಿಕೊಟ್ಟಿರುವುದು ನಿಜಕ್ಕೂ ಅಭಿನಂದನಾರ್ಹ.

ಇಂಡಿಗನತ್ತ, ಮೆಂದಾರೆ, ದೊಡ್ಡಾಣೆ, ಕೊಕ್ಕಬೋರೆ, ತೋಕೆರೆ ಗ್ರಾಮಗಳ ಒಳಹೊಕ್ಕು, ಅಲ್ಲಿ ನಿಕೃಷ್ಟ ಬಾಳ್ವೆ ನಡೆಸುತ್ತಿರುವ ಅವಕಾಶ ವಂಚಿತ ಜನರನ್ನು ನಾಡಿನ ಜನತೆಗೆ ಪರಿಚಯಿಸುವ ಮೂಲಕ ‘ಆಂದೋಲನ’ ತಂಡ ನಾಗರಿಕ ಜಗತ್ತಿನ ಕಣ್ಣುಗಳಿಗೆ ಕವಿದಿದ್ದ ಪೊರೆಯನ್ನು ಕಳಚಿಹಾಕಿದೆ. ನಮ್ಮ ನಡುವೆಯೇ ಇಂತಹ ಗ್ರಾಮಗಳೂ ಇವೆಯೇ? ಎಂದು ಹುಬ್ಬೇರಿಸುವಂತೆ ವರದಿ ಮಾಡಲಾಗಿದೆ. ವರದಿಗಳಲ್ಲಿರುವ ಮಾನವೀಯ ಧ್ವನಿ ಮತ್ತು ಸಂವೇದನಾಶೀಲ ಅಕ್ಷರಗಳು ಆಳುವ ವರ್ಗಗಳನ್ನಷ್ಟೇ ಅಲ್ಲದೆ, ಈ ವರ್ಗಗಳನ್ನು ಮೆರೆಸುವ ಪ್ರಜ್ಞಾವಂತ ಸಮಾಜವನ್ನೂ ಎಚ್ಚರಿಸುವಂತಿವೆ. ಈ ವರದಿಗಾರಿಕೆ ಬಗ್ಗೆ ,ಆಂದೋಲನ’ದ ಬೆನ್ನುತಟ್ಟುವುದರೊಂದಿಗೇ, ನಮ್ಮ ಚುನಾಯಿತ ಪ್ರತಿನಿಧಿಗಳ ಎದೆಯ ಕದ ತಟ್ಟುವುದೂ ಅತ್ಯವಶ್ಯ ಎನ್ನುವುದನ್ನು ಈ ವರದಿಗಳು ನಿರೂಪಿಸಿವೆ. -ನಾ.ದಿವಾಕರ, ಮೈಸೂರು.

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago