ಓದುಗರ ಪತ್ರ
ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ನಲ್ಲಿ ತಮಿಳು ಭಾಷೆಯಲ್ಲಿ ವಾದ ಮಂಡಿಸಲು ಅವಕಾಶ ನೀಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುವ ಸಾಧ್ಯತೆ ತೀರಾ ಕಡಿಮೆ. ಆದರೆ, ತಮಿಳುನಾಡಿನ ಈ ಬೇಡಿಕೆ ಇತರ ರಾಜ್ಯದವರನ್ನೂ ಇಂತಹ ಬೇಡಿಕೆಗೆ ಪ್ರಚೋದಿಸುವುದನ್ನು ಅಲ್ಲಗಳೆಯಲಾಗದು. ಹಾಗೆಯೇ ತಮಿಳರೂ ಕೂಡ ತಮ್ಮ ಈ ಅಸ್ಮಿತೆಯ ಬೇಡಿಕೆಯನ್ನು ಅಷ್ಟು ಸುಲಭವಾಗಿ ಕೈಬಿಡುವ ಸಾಧ್ಯತೆ ಕಡಿಮೆ. ಮದ್ರಾಸ್ಅನ್ನು ಚೆನ್ನೈ ಎಂದು ಮತ್ತು ತಮಿಳುನಾಡಿನ ಬಾನುಲಿ ಕೇಂದ್ರಗಳನ್ನು ವಾನೊಲಿ ನಿಲಯಂ ಎಂದು ಬದಲಾಯಿಸಿರುವ ಅವರಿಗೆ ಹೋರಾಟ ಹೊಸದಲ್ಲ ಮತ್ತು ಅದನ್ನು ಸಾಧಿಸಿಕೊಳ್ಳುತ್ತಾರೆ. ಇದು ಇನ್ನೊಂದು ಸುತ್ತಿನ ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತಿಕ್ಕಾಟಕ್ಕೆ ನಾಂದಿಯಾಗಬಹುದೇನೋ ಎನ್ನುವ ಸಂಶಯ ಕಾಡುತ್ತಿದೆ.
–ರಮಾನಂದ ಶರ್ಮಾ, ಬೆಂಗಳೂರು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…