ಓದುಗರ ಪತ್ರ
ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ನಲ್ಲಿ ತಮಿಳು ಭಾಷೆಯಲ್ಲಿ ವಾದ ಮಂಡಿಸಲು ಅವಕಾಶ ನೀಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುವ ಸಾಧ್ಯತೆ ತೀರಾ ಕಡಿಮೆ. ಆದರೆ, ತಮಿಳುನಾಡಿನ ಈ ಬೇಡಿಕೆ ಇತರ ರಾಜ್ಯದವರನ್ನೂ ಇಂತಹ ಬೇಡಿಕೆಗೆ ಪ್ರಚೋದಿಸುವುದನ್ನು ಅಲ್ಲಗಳೆಯಲಾಗದು. ಹಾಗೆಯೇ ತಮಿಳರೂ ಕೂಡ ತಮ್ಮ ಈ ಅಸ್ಮಿತೆಯ ಬೇಡಿಕೆಯನ್ನು ಅಷ್ಟು ಸುಲಭವಾಗಿ ಕೈಬಿಡುವ ಸಾಧ್ಯತೆ ಕಡಿಮೆ. ಮದ್ರಾಸ್ಅನ್ನು ಚೆನ್ನೈ ಎಂದು ಮತ್ತು ತಮಿಳುನಾಡಿನ ಬಾನುಲಿ ಕೇಂದ್ರಗಳನ್ನು ವಾನೊಲಿ ನಿಲಯಂ ಎಂದು ಬದಲಾಯಿಸಿರುವ ಅವರಿಗೆ ಹೋರಾಟ ಹೊಸದಲ್ಲ ಮತ್ತು ಅದನ್ನು ಸಾಧಿಸಿಕೊಳ್ಳುತ್ತಾರೆ. ಇದು ಇನ್ನೊಂದು ಸುತ್ತಿನ ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತಿಕ್ಕಾಟಕ್ಕೆ ನಾಂದಿಯಾಗಬಹುದೇನೋ ಎನ್ನುವ ಸಂಶಯ ಕಾಡುತ್ತಿದೆ.
–ರಮಾನಂದ ಶರ್ಮಾ, ಬೆಂಗಳೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…