ಓದುಗರ ಪತ್ರ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ ೨೦೮ಸ್ಥಾನಗಳನ್ನು ಗೆಲ್ಲುವ ಮೂಲಕ ತೃಣಮೂಲ ಕಾಂಗ್ರೆಸ್ ಪಕ್ಷದ ಸರ್ವೋಚ್ಚ ನಾಯಕಿ ಮಮತಾ ಬ್ಯಾನರ್ಜಿ ಅವರ ೧೫ ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿದೆ. ಆಡಳಿತಾರೂಢ ಟಿಎಂಸಿ ಕೇವಲ ೮೧ ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ.
ಸುಮಾರು ೩ ದಶಕಗಳ ಕಾಲ ಬಂಗಾಳದಲ್ಲಿ ಅಧಿಕಾರ ನಡೆಸಿದ್ದ ಎಡ ಪಕ್ಷಗಳು ಗಳಿಸಿರುವ ಸ್ಥಾನ ಕೇವಲ ೨ ಮಾತ್ರ. ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಕಮಲವನ್ನು ಅರಳಿಸುವ ದೃಢ ಸಂಕಲ್ಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೂಡಿದ್ದ ಚುನಾವಣಾ ತಂತ್ರಗಳು ಯಶಸ್ವಿಯಾಗಿವೆ. ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ೧೮ಕ್ಕೂ ಹೆಚ್ಚು ಬಾರಿ ಚುನಾವಣಾ ಪ್ರಚಾರ ನಡೆಸಿ, ಮತದಾರರನ್ನು ಸೂಜಿಗಲ್ಲಿನಂತೆ ಆಕರ್ಷಿಸಿದ್ದು ಪಕ್ಷದ ಅಭೂತಪೂರ್ವ ಗೆಲುವಿಗೆ ನೆರವಾಗಿದೆ. ಅದೂ ಅಲ್ಲದೇ, ಟಿಎಂಸಿಯ ಭದ್ರಕೋಟೆಯಾಗಿದ್ದ ಮಹಿಳೆಯರನ್ನು ಆಕರ್ಷಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ದೊರೆತಿರುವ ಈ ಅಭೂತಪೂರ್ವ ಜನಾದೇಶವನ್ನು ಪಕ್ಷ ಉತ್ತಮ ರೀತಿಯಲ್ಲಿ ಬಳಸಿಕೊಂಡು, ಭ್ರಷ್ಟಾಚಾರ ರಹಿತ ಹಾಗೂ ಜನಪರ ಆಡಳಿತವನ್ನು ನೀಡಲಿ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…