Andolana originals

ಓದುಗರ ಪತ್ರ: ಆರು ತಿಂಗಳ ಅಮಾನತ್ತು ಸರಿಯಲ್ಲ

ವಿಧಾನಸಭಾ ಕಲಾಪದ ವೇಳೆ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ೧೮ ಬಿಜೆಪಿ ಶಾಸಕರನ್ನು ೬ ತಿಂಗಳ ಕಾಲ ಸದನದ ಕಲಾಪದಿಂದ ಅಮಾನತ್ತುಗೊಳಿಸಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಆದೇಶಿಸಿದ್ದಾರೆ.

ರಾಜ್ಯಾದ್ಯಂತ ಹನಿಟ್ರ್ಯಾಪ್ ಪ್ರಕರಣ ಬಾರೀ ಸುದ್ದಿಯಲ್ಲಿದ್ದು, ಸಿಬಿಐ ಅಥವಾ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಕೆಲವು ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿದ್ದಾರೆಂದು  ಆ ಶಾಸಕರನ್ನು ಆರು ತಿಂಗಳ ಕಾಲ ಅಮಾನತ್ತುಗೊಳಿಸುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದರು. ಈ ನಿರ್ಣಯ ಅಂಗೀಕಾರಗೊಂಡ ಬೆನ್ನಲ್ಲೇ ಸಭಾಧ್ಯಕ್ಷರ ಈ ಆದೇಶ ಹೊರಬಿದ್ದಿದೆ. ಯಾರೇ ಆದರೂ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಈ ಹಿಂದೆ ಕೂಡ ಹಲವು ಕಾರಣಗಳಿಂದ ಅನೇಕ ಶಾಸಕರು ಅಮಾನತ್ತುಗೊಂಡಿದ್ದಾರೆ. ಆದರೆ, ಆರು ತಿಂಗಳುಗಳ ಕಾಲ ಅಮಾನತ್ತುಗೊಳಿಸಿರುವುದು ಇದೇ ಮೊದಲು ಎನ್ನಬಹುದು. ಇದರೊಂದಿಗೆ ಅಮಾನತ್ತಿನ ಅವಽಯಲ್ಲಿ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ನೀಡದಂತೆ ತಡೆ ಹಿಡಿಯಲಾಗಿದೆ ಎಂದೂ ತಿಳಿದು ಬಂದಿದೆ. ಶಾಸಕರು ವಿರೋಧ ವ್ಯಕ್ತಪಡಿಸಲು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹಲವಾರು ಮಾರ್ಗಗಳಿವೆ. ಅದನ್ನು ಬಿಟ್ಟು ಈ ರೀತಿಯಾಗಿ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಅಲ್ಲದೆ ಈ ಕಾರಣಕ್ಕಾಗಿ ಆರು ತಿಂಗಳ ದೀರ್ಘ ಕಾಲ ಅಮಾನತ್ತು ಮಾಡುವುದೂ ಸರಿಯಲ್ಲ.

-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

59 mins ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

1 hour ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

3 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

4 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

4 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

4 hours ago