Andolana originals

ಓದುಗರ ಪತ್ರ: ಆರು ತಿಂಗಳ ಅಮಾನತ್ತು ಸರಿಯಲ್ಲ

ವಿಧಾನಸಭಾ ಕಲಾಪದ ವೇಳೆ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ೧೮ ಬಿಜೆಪಿ ಶಾಸಕರನ್ನು ೬ ತಿಂಗಳ ಕಾಲ ಸದನದ ಕಲಾಪದಿಂದ ಅಮಾನತ್ತುಗೊಳಿಸಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಆದೇಶಿಸಿದ್ದಾರೆ.

ರಾಜ್ಯಾದ್ಯಂತ ಹನಿಟ್ರ್ಯಾಪ್ ಪ್ರಕರಣ ಬಾರೀ ಸುದ್ದಿಯಲ್ಲಿದ್ದು, ಸಿಬಿಐ ಅಥವಾ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಕೆಲವು ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿದ್ದಾರೆಂದು  ಆ ಶಾಸಕರನ್ನು ಆರು ತಿಂಗಳ ಕಾಲ ಅಮಾನತ್ತುಗೊಳಿಸುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದರು. ಈ ನಿರ್ಣಯ ಅಂಗೀಕಾರಗೊಂಡ ಬೆನ್ನಲ್ಲೇ ಸಭಾಧ್ಯಕ್ಷರ ಈ ಆದೇಶ ಹೊರಬಿದ್ದಿದೆ. ಯಾರೇ ಆದರೂ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಈ ಹಿಂದೆ ಕೂಡ ಹಲವು ಕಾರಣಗಳಿಂದ ಅನೇಕ ಶಾಸಕರು ಅಮಾನತ್ತುಗೊಂಡಿದ್ದಾರೆ. ಆದರೆ, ಆರು ತಿಂಗಳುಗಳ ಕಾಲ ಅಮಾನತ್ತುಗೊಳಿಸಿರುವುದು ಇದೇ ಮೊದಲು ಎನ್ನಬಹುದು. ಇದರೊಂದಿಗೆ ಅಮಾನತ್ತಿನ ಅವಽಯಲ್ಲಿ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ನೀಡದಂತೆ ತಡೆ ಹಿಡಿಯಲಾಗಿದೆ ಎಂದೂ ತಿಳಿದು ಬಂದಿದೆ. ಶಾಸಕರು ವಿರೋಧ ವ್ಯಕ್ತಪಡಿಸಲು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹಲವಾರು ಮಾರ್ಗಗಳಿವೆ. ಅದನ್ನು ಬಿಟ್ಟು ಈ ರೀತಿಯಾಗಿ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಅಲ್ಲದೆ ಈ ಕಾರಣಕ್ಕಾಗಿ ಆರು ತಿಂಗಳ ದೀರ್ಘ ಕಾಲ ಅಮಾನತ್ತು ಮಾಡುವುದೂ ಸರಿಯಲ್ಲ.

-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

51 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago