ಓದುಗರ ಪತ್ರ
ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ತಾವು ಬರೆಯುತ್ತಿದ್ದ ಕಾದಂಬರಿಯ ವಸ್ತುವಿನ ಸಂಪೂರ್ಣ ವಾಸ್ತವ ಸಂಗತಿಯನ್ನು ತಿಳಿದು ಬರೆಯುತ್ತಿದ್ದರು. ಅವರು ‘ಆವರಣ’ ಕಾದಂಬರಿಯನ್ನು ಬರೆಯುವ ಮುನ್ನಸಾಹಿತಿ ಬಾನು ಮುಷ್ತಾಕ್ರವರ ಮನೆಯಲ್ಲಿ ತಂಗಿದ್ದು, ಧರ್ಮದ ಆಚಾರ ವಿಚಾರ ಹಾಗೂ ಧಾರ್ಮಿಕ ಆಚರಣೆಗಳ ಬಗ್ಗೆ ಆಳವಾದ ಅಧ್ಯಯನ ಮಾಡಿರುವುದಾಗಿ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದನ್ನೂ ಓದಿ:-ಓದುಗರ ಪತ್ರ: ಆಟೋ ಬಾಡಿಗೆ ಹೆಚ್ಚು ವಸೂಲಿಗೆ ಕಡಿವಾಣ ಹಾಕಿ
ಇದೊಂದು ರೀತಿಯಲ್ಲಿ ‘ಭಾವ ಭಯ’ ಮೀರಿದ ಬಾಂಧವ್ಯ. ಇದು ಬಾನು ಮುಷ್ತಾಕ್ರವರ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಅಲ್ಲದೇ ಮುಷ್ತಾಕ್ರವರ ಸಂಬಂಧಿಕರ ಜೊತೆಯಲ್ಲೇ ಹೋಗಿ,ಖಬರಸ್ಥಾನ, ಮಸೀದಿಗಳಿಗೆ ಭೇಟಿ ನೀಡಿ ಅವರಿಂದ ಸಂಪೂರ್ಣ ಮಾಹಿತಿ ಸಂಗ್ರಹಿಸಿರುವ ಎಸ್.ಎಲ್. ಭೈರಪ್ಪನವರ ಧೈರ್ಯವನ್ನು ಮೆಚ್ಚಲೇಬೇಕು. ಈ ರೀತಿ ವಾಸ್ತವವನ್ನೂ ಅರಿತು ಬರೆಯುತ್ತಿದ್ದ ಎಸ್. ಎಲ್. ಭೈರಪ್ಪನವರಿಗೆ ಲಕ್ಷಾಂತರ ಮಂದಿ ಓದುಗರು ಇದ್ದುದು ಸಹಜವೇ ಆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಬಾನು ಮುಷ್ತಾಕ್ ರವರ ಧೈರ್ಯ ಮತ್ತು ಭೈರಪ್ಪನವರಿಗೆ ನೀಡಿದ ಆತಿಥ್ಯ ಎಂದಿಗೂ ಮಾಸದ ಸಂಗತಿ, ಹೃದಯದ ಹಣತೆ ಎಂದರೆ ಇದೇ ಅಲ್ಲವೇ ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…