ಓದುಗರ ಪತ್ರ
ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ತಾವು ಬರೆಯುತ್ತಿದ್ದ ಕಾದಂಬರಿಯ ವಸ್ತುವಿನ ಸಂಪೂರ್ಣ ವಾಸ್ತವ ಸಂಗತಿಯನ್ನು ತಿಳಿದು ಬರೆಯುತ್ತಿದ್ದರು. ಅವರು ‘ಆವರಣ’ ಕಾದಂಬರಿಯನ್ನು ಬರೆಯುವ ಮುನ್ನಸಾಹಿತಿ ಬಾನು ಮುಷ್ತಾಕ್ರವರ ಮನೆಯಲ್ಲಿ ತಂಗಿದ್ದು, ಧರ್ಮದ ಆಚಾರ ವಿಚಾರ ಹಾಗೂ ಧಾರ್ಮಿಕ ಆಚರಣೆಗಳ ಬಗ್ಗೆ ಆಳವಾದ ಅಧ್ಯಯನ ಮಾಡಿರುವುದಾಗಿ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದನ್ನೂ ಓದಿ:-ಓದುಗರ ಪತ್ರ: ಆಟೋ ಬಾಡಿಗೆ ಹೆಚ್ಚು ವಸೂಲಿಗೆ ಕಡಿವಾಣ ಹಾಕಿ
ಇದೊಂದು ರೀತಿಯಲ್ಲಿ ‘ಭಾವ ಭಯ’ ಮೀರಿದ ಬಾಂಧವ್ಯ. ಇದು ಬಾನು ಮುಷ್ತಾಕ್ರವರ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಅಲ್ಲದೇ ಮುಷ್ತಾಕ್ರವರ ಸಂಬಂಧಿಕರ ಜೊತೆಯಲ್ಲೇ ಹೋಗಿ,ಖಬರಸ್ಥಾನ, ಮಸೀದಿಗಳಿಗೆ ಭೇಟಿ ನೀಡಿ ಅವರಿಂದ ಸಂಪೂರ್ಣ ಮಾಹಿತಿ ಸಂಗ್ರಹಿಸಿರುವ ಎಸ್.ಎಲ್. ಭೈರಪ್ಪನವರ ಧೈರ್ಯವನ್ನು ಮೆಚ್ಚಲೇಬೇಕು. ಈ ರೀತಿ ವಾಸ್ತವವನ್ನೂ ಅರಿತು ಬರೆಯುತ್ತಿದ್ದ ಎಸ್. ಎಲ್. ಭೈರಪ್ಪನವರಿಗೆ ಲಕ್ಷಾಂತರ ಮಂದಿ ಓದುಗರು ಇದ್ದುದು ಸಹಜವೇ ಆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಬಾನು ಮುಷ್ತಾಕ್ ರವರ ಧೈರ್ಯ ಮತ್ತು ಭೈರಪ್ಪನವರಿಗೆ ನೀಡಿದ ಆತಿಥ್ಯ ಎಂದಿಗೂ ಮಾಸದ ಸಂಗತಿ, ಹೃದಯದ ಹಣತೆ ಎಂದರೆ ಇದೇ ಅಲ್ಲವೇ ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…