ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ. ಆದರೆ, ಬೆಂಗಳೂರಿನ ವಿ.ವಿ.ಪುರಂ ಮಾದರಿಯಲ್ಲಿ ಮೈಸೂರಿನಲ್ಲಿ ಒಂದು ಸುಸಜ್ಜಿತ, ಅಧಿಕೃತ ‘ಫುಡ್ ಸ್ಟ್ರೀಟ್’ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ.
ಪ್ರಸ್ತುತ ನಗರದ ವಿವಿಧೆಡೆ ಚದುರಿಹೋಗಿರುವ ಆಹಾರದ ಗಾಡಿಗಳನ್ನು ಒಂದೇ ಸೂರಿನಡಿ ತರುವುದು ಇಂದಿನ ಅಗತ್ಯ. ಇದರಿಂದ ಪ್ರವಾಸಿಗರಿಗೆ ಸ್ಥಳೀಯ ಖಾದ್ಯಗಳನ್ನು ಸವಿಯಲು ಸುಲಭವಾಗುತ್ತದೆ. ಒಂದು ನಿಗದಿತ ಜಾಗದಲ್ಲಿ ಶುದ್ಧ ಕುಡಿಯುವ ನೀರು, ವೈಜ್ಞಾನಿಕ ಕಸ ವಿಲೇವಾರಿ ಮತ್ತು ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಈ ಆಹಾರದ ಬೀದಿಯನ್ನು ಅಭಿವೃದ್ಧಿಪಡಿಸಬೇಕು. ಇದು ಕೇವಲ ರುಚಿಯ ತಾಣವಾಗದೆ, ನೂರಾರು ಸಣ್ಣ ವ್ಯಾಪಾರಿಗಳಿಗೆ ಉದ್ಯೋಗ ನೀಡುವ ಆರ್ಥಿಕ ಕೇಂದ್ರ ಆಗಬಲ್ಲದು. ಮೈಸೂರಿನ ಪಾರಂಪರಿಕ ಸೊಗಡಿಗೆ ಧಕ್ಕೆಯಾಗದಂತೆ ಒಂದು ಹೈಟೆಕ್ ‘ಫುಡ್ ಸ್ಟ್ರೀಟ್’ ನಿರ್ಮಾಣವಾದರೆ, ಅದು ಪ್ರವಾಸೋದ್ಯಮಕ್ಕೆ ಹೊಸ ಕಳೆ ತರುವುದರಲ್ಲಿ ಸಂಶಯವಿಲ್ಲ. ಸಂಬಂಧಪಟ್ಟವರು ಈ ನಿಟ್ಟಿನಲ್ಲಿ ಶೀಘ್ರ ಗಮನಹರಿಸಬೇಕಿದೆ.
-ಜಿ.ಎಂ.ತೇಜಸ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…