ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ. ಆದರೆ, ಬೆಂಗಳೂರಿನ ವಿ.ವಿ.ಪುರಂ ಮಾದರಿಯಲ್ಲಿ ಮೈಸೂರಿನಲ್ಲಿ ಒಂದು ಸುಸಜ್ಜಿತ, ಅಧಿಕೃತ ‘ಫುಡ್ ಸ್ಟ್ರೀಟ್’ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ.
ಪ್ರಸ್ತುತ ನಗರದ ವಿವಿಧೆಡೆ ಚದುರಿಹೋಗಿರುವ ಆಹಾರದ ಗಾಡಿಗಳನ್ನು ಒಂದೇ ಸೂರಿನಡಿ ತರುವುದು ಇಂದಿನ ಅಗತ್ಯ. ಇದರಿಂದ ಪ್ರವಾಸಿಗರಿಗೆ ಸ್ಥಳೀಯ ಖಾದ್ಯಗಳನ್ನು ಸವಿಯಲು ಸುಲಭವಾಗುತ್ತದೆ. ಒಂದು ನಿಗದಿತ ಜಾಗದಲ್ಲಿ ಶುದ್ಧ ಕುಡಿಯುವ ನೀರು, ವೈಜ್ಞಾನಿಕ ಕಸ ವಿಲೇವಾರಿ ಮತ್ತು ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಈ ಆಹಾರದ ಬೀದಿಯನ್ನು ಅಭಿವೃದ್ಧಿಪಡಿಸಬೇಕು. ಇದು ಕೇವಲ ರುಚಿಯ ತಾಣವಾಗದೆ, ನೂರಾರು ಸಣ್ಣ ವ್ಯಾಪಾರಿಗಳಿಗೆ ಉದ್ಯೋಗ ನೀಡುವ ಆರ್ಥಿಕ ಕೇಂದ್ರ ಆಗಬಲ್ಲದು. ಮೈಸೂರಿನ ಪಾರಂಪರಿಕ ಸೊಗಡಿಗೆ ಧಕ್ಕೆಯಾಗದಂತೆ ಒಂದು ಹೈಟೆಕ್ ‘ಫುಡ್ ಸ್ಟ್ರೀಟ್’ ನಿರ್ಮಾಣವಾದರೆ, ಅದು ಪ್ರವಾಸೋದ್ಯಮಕ್ಕೆ ಹೊಸ ಕಳೆ ತರುವುದರಲ್ಲಿ ಸಂಶಯವಿಲ್ಲ. ಸಂಬಂಧಪಟ್ಟವರು ಈ ನಿಟ್ಟಿನಲ್ಲಿ ಶೀಘ್ರ ಗಮನಹರಿಸಬೇಕಿದೆ.
-ಜಿ.ಎಂ.ತೇಜಸ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…