Mysore
29
few clouds

Social Media

ಗುರುವಾರ, 05 ಫೆಬ್ರವರಿ 2026
Light
Dark

ಓದುಗರ ಪತ್ರ | ನಾಲ್ಕು ವರ್ಷಗಳಾದರೂ ಮುಗಿಯದ ಕಾಮಗಾರಿ

ಓದುಗರ ಪತ್ರ

ಎಚ್. ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಯು ೨೦೨೦-೨೧ರಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಶುರುವಾಯಿತು. ಆದರೆ ನಾಲ್ಕು ವರ್ಷಗಳೇ ಕಳೆದರೂ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ.

ಹೈರಿಗೆ ಗ್ರಾಮದ ೧ನೇ ವಾರ್ಡ ೨ ನೇ ವಾರ್ಡ್‌ನಲ್ಲಿ ಅರ್ಧಂಬರ್ಧ ಕಾಮಗಾರಿ ಮಾಡಲಾಗಿದೆ. ೩ ಮತ್ತು ೪ನೇ ವಾರ್ಡ್‌ಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ಹಳ್ಳ ತೆಗೆದು ಅರೆಬರೆ ಮಣ್ಣು ಮುಚ್ಚಿದ್ದಾರೆ. ೧ ಮತ್ತು ೨ನೇ ವಾರ್ಡ್‌ನಲ್ಲಿ ಜಲ ಜೀವನ್ ಮಿಷನ್ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಸಾರ್ವಜನಿಕರ ಆರೋಪಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೆ ಇತ್ತ ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ

Tags:
error: Content is protected !!