Andolana originals

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ ಹೆಸರಿನಲ್ಲಿ ಹೆಸರುವಾಸಿಯಾಗಿದ್ದು, ಸಿಲ್ಕ್ ಸೀರೆ ತಯಾರಿಸಲು ಕಚ್ಚಾ ರೇಷ್ಮೆ ಒದಗಿಸುತ್ತಿರುವ (ತಿ.ನರಸೀಪುರದಲ್ಲಿ ಇರುವ) ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಆತುರಾತುರವಾದ ನಿರ್ಧಾರ ಮಾಡಿ ಬೌಂಡರಿ ಗುರುತಿಸಿ ಸಿಲ್ಕ್ ಫಿಲೇಚರ್ ಮುಚ್ಚಲು ಮುಂದಾಗಿರುವುದು ವಿಪರ್ಯಾಸವೇ ಸರಿ.

ಈ ಸಿಲ್ಕ್ ಫಿಲೇಚರ್ ರೇಷ್ಮೆ ನೂಲಿನ ಎಳೆ(ಕಚ್ಚಾ ರೇಷ್ಮೆ)ಯನ್ನು ತಯಾರಿಸಿ ಮೈಸೂರಿನ ರೇಷ್ಮೆ ಕಾರ್ಖಾನೆಗೆ ಹಾಗೂ ಚನ್ನಪಟ್ಟಣದ ರೇಷ್ಮೆ ಕಾರ್ಖಾನೆಗೆ ಸರಬರಾಜು ಮಾಡಿ ಮೈಸೂರು ಸಿಲ್ಕ್ ಸೀರೆಗಳ ಉತ್ಪಾದನೆಗೆ ನೆರವಾಗುತ್ತಿತ್ತು. ಸರ್ಕಾರ ಕೂಡಲೇ ಕ್ರೀಡಾಂಗಣ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ಬಳಸಬೇಕು ಹಾಗೂ ಸಿಲ್ಕ್ ಫಿಲೇಚರ್‌ನ್ನು ಯಥಾಸ್ಥಿತಿಯಲ್ಲಿ ಕಾಪಾಡಿಕೊಂಡು ಜಾಗತಿಕ ಮನ್ನಣೆ ಪಡೆದಿರುವ ನಮ್ಮ ಮೈಸೂರು ಸಿಲ್ಕ್ ಸೀರೆ ಉದ್ಯಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

13 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

15 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

15 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

16 hours ago