ಓದುಗರ ಪತ್ರ
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ ಹೆಸರಿನಲ್ಲಿ ಹೆಸರುವಾಸಿಯಾಗಿದ್ದು, ಸಿಲ್ಕ್ ಸೀರೆ ತಯಾರಿಸಲು ಕಚ್ಚಾ ರೇಷ್ಮೆ ಒದಗಿಸುತ್ತಿರುವ (ತಿ.ನರಸೀಪುರದಲ್ಲಿ ಇರುವ) ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಆತುರಾತುರವಾದ ನಿರ್ಧಾರ ಮಾಡಿ ಬೌಂಡರಿ ಗುರುತಿಸಿ ಸಿಲ್ಕ್ ಫಿಲೇಚರ್ ಮುಚ್ಚಲು ಮುಂದಾಗಿರುವುದು ವಿಪರ್ಯಾಸವೇ ಸರಿ.
ಈ ಸಿಲ್ಕ್ ಫಿಲೇಚರ್ ರೇಷ್ಮೆ ನೂಲಿನ ಎಳೆ(ಕಚ್ಚಾ ರೇಷ್ಮೆ)ಯನ್ನು ತಯಾರಿಸಿ ಮೈಸೂರಿನ ರೇಷ್ಮೆ ಕಾರ್ಖಾನೆಗೆ ಹಾಗೂ ಚನ್ನಪಟ್ಟಣದ ರೇಷ್ಮೆ ಕಾರ್ಖಾನೆಗೆ ಸರಬರಾಜು ಮಾಡಿ ಮೈಸೂರು ಸಿಲ್ಕ್ ಸೀರೆಗಳ ಉತ್ಪಾದನೆಗೆ ನೆರವಾಗುತ್ತಿತ್ತು. ಸರ್ಕಾರ ಕೂಡಲೇ ಕ್ರೀಡಾಂಗಣ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ಬಳಸಬೇಕು ಹಾಗೂ ಸಿಲ್ಕ್ ಫಿಲೇಚರ್ನ್ನು ಯಥಾಸ್ಥಿತಿಯಲ್ಲಿ ಕಾಪಾಡಿಕೊಂಡು ಜಾಗತಿಕ ಮನ್ನಣೆ ಪಡೆದಿರುವ ನಮ್ಮ ಮೈಸೂರು ಸಿಲ್ಕ್ ಸೀರೆ ಉದ್ಯಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…