Andolana originals

ಓದುಗರ ಪತ್ರ: ಸರ್ಕಾರಿ ಶಾಲೆಗಳ ಸಂಯೋಜನೆ ಕೈಬಿಡಿ

ರಾಜ್ಯ ಸರ್ಕಾರವು ಸಂಯೋಜನೆ ಹೆಸರಿನಡಿ ೪,೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ.

ಸರ್ಕಾರದ ಈ ನಡೆಯನ್ನು ಖಂಡಿಸಿ AIDSO ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ‘ಹಬ್ ಅಂಡ್ ಸ್ಪೋಕ್’ ಯೋಜನೆಯಡಿಯಲ್ಲಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಇತರೆ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಇದಕ್ಕಾಗಿ ಶಿಕ್ಷಣ ಸುಧಾರಣಾ ಸಮಿತಿಯೊಂದನ್ನೂ ರಚಿಸಿದೆ.

ಸದ್ಯ ರಾಜ್ಯದಲ್ಲಿ ೪ ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ೧೦ ಮಕ್ಕಳಿಗಿಂತಲೂ ಕಡಿಮೆ ಇದೆ. ಈ ಶಾಲೆಗಳ ಭವಿಷ್ಯದ ಕುರಿತು ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬಿಸಿಊಟ ಸಿಬ್ಬಂದಿಗಳಲ್ಲಿ ಆತಂಕವಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಬಹುತೇಕ ಮಕ್ಕಳು ಬಡಕುಟುಂಬಗಳಿಂದ ಬಂದವರು. ರಾಜ್ಯದಲ್ಲಿ ೬,೦೦೦ಕ್ಕೂ ಹೆಚ್ಚು ಏಕೋಪಾಧ್ಯಯ ಶಾಲೆಗಳಿದ್ದರೂ ಕನಿಷ್ಠ ೫೦ ಸಾವಿರ ಶಿಕ್ಷಕರನ್ನೂ ನೇಮಕ ಮಾಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಬಹುತೇಕ ಶಾಲೆಗಳಲ್ಲಿ ಕನಿಷ್ಠ ಮೂಲಸೌಕರ್ಯಗಳೂ ಇಲ್ಲ. ಹೀಗಾಗಿ ಸಹಜವಾಗಿಯೇ ಸೌಕರ್ಯಗಳಿಲ್ಲದ ಶಾಲೆಗಳಲ್ಲಿ ದಾಖಲಾತಿಯೂ ಕಡಿಮೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಆ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಮಕ್ಕಳನ್ನು ಆಕರ್ಷಿಸಬೇಕು. ಆದ್ದರಿಂದ ಸರ್ಕಾರ ಶಾಲೆಗಳ ಸಂಯೋಜನೆ ನೀತಿಯನ್ನು ಬಿಟ್ಟು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಲಿ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

7 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

8 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

8 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

9 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

9 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago