ಓದುಗರ ಪತ್ರ
ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ,
ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ ಇವರು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಇವರ ಜಯಂತಿಯನ್ನು ಸರ್ವಜನರು ಕೂಡಿ
ಆಚರಿಸಿ ಸಂಭ್ರಮಿಸಬೇಕು. ಆದರೆ ಇಂದು ಜಾತಿ ಬಲದ ಪ್ರದರ್ಶನದ ಸರಕಾಗಿ ಈ ಮಹಾನುಭಾವರ ಜಯಂತಿಗಳು ಬಳಕೆಯಾಗುತ್ತಿರುವುದು ಘೋರ ದುರಂತವೇ ಸರಿ. ‘ಎಲ್ಲಾ ಜನ ಸಮುದಾಯದ ಸೂಚಕವಾಗಿ ವಿಶಾಲ ಅರ್ಥದಲ್ಲಿ ಬಳಕೆಯಾಗಬೇಕಾದ ಸಾಮಾಜಿಕರು ಅಥವಾ ಸಮಾಜದ ಬಂಧುಗಳು ಎಂಬ ವಾಕ್ಯವನ್ನು ಯಾವುದೋ ಒಂದು ಜಾತಿಗೆ ಸೀಮಿತವಾಗಿ ಬಿಂಬಿಸುವ ಪ್ರಯತ್ನಗಳು ಕಾಣುತ್ತಿವೆ. ಆ ಮೂಲಕ ಯಾವುದೇ ತಾರತಮ್ಯವಿರದ ಅವರ ಸರ್ವಶ್ರೇಷ್ಠ ಚಿಂತನೆಗಳಿಗೆ ಮಸಿ ಬಳಿಯುವಂತಾಗುತ್ತಿದೆ. ಮಹನೀಯರ ಜಯಂತ್ಯುತ್ಸವಗಳು ಅವರ ಆಚಾರ – ವಿಚಾರ, ಜೀವನ, ಸಾಧನೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಅರ್ಥಪೂರ್ಣ ವೇದಿಕೆಯಾಗಬೇಕೆ ಹೊರತು ಜಾತಿಯನ್ನು ಪೋಷಿಸುವ, ವೈಷಮ್ಯಕ್ಕೆ ಎಡೆಮಾಡಿಕೊಡುವ ಜಾತಿ ಕೇಂದ್ರಿತ
ಕಾರ್ಯಕ್ರಮವಾಗಬಾರದು. ಕಡಿಮೆ ಸಂಖ್ಯೆಯಲ್ಲಿರುವ ತಳ ಸಮುದಾಯದವರ ಆಸೆ, ಆಶೋತ್ತರಗಳನ್ನು, ಅವರ ಆತಂಕ, ತಲ್ಲಣಗಳನ್ನು ಗಮನದಲ್ಲಿರಿಸಿಕೊಂಡು ಜಯಂತಿಯನ್ನು ಆಚರಿಸುವಂತಾದರೆ ಮಹನೀಯರ ಜಯಂತಿ ಕಾರ್ಯಕ್ರಮಗಳು ಸಾರ್ಥಕತೆ ಪಡೆದುಕೊಳ್ಳುತ್ತವೆ. ಈ ಬಗ್ಗೆ ಎಲ್ಲರೂ ಆಲೋಚಿಸಿ ಹೆಜ್ಜೆಯಿಡಬೇಕಿದೆ.
– ಕೊತ್ತಲವಾಡಿ ಶಿವಕುಮಾರ್, ಚಾಮರಾಜನಗರ ತಾ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…