Andolana originals

ಓದುಗರ ಪತ್ರ: ಮಹನೀಯರ ಜಯಂತಿಗೆ ಜಾತಿ ಚೌಕಟ್ಟು ಸಲ್ಲದು

ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ,
ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ ಇವರು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಇವರ ಜಯಂತಿಯನ್ನು ಸರ್ವಜನರು ಕೂಡಿ
ಆಚರಿಸಿ ಸಂಭ್ರಮಿಸಬೇಕು. ಆದರೆ ಇಂದು ಜಾತಿ ಬಲದ ಪ್ರದರ್ಶನದ ಸರಕಾಗಿ ಈ ಮಹಾನುಭಾವರ ಜಯಂತಿಗಳು ಬಳಕೆಯಾಗುತ್ತಿರುವುದು ಘೋರ ದುರಂತವೇ ಸರಿ. ‘ಎಲ್ಲಾ ಜನ ಸಮುದಾಯದ ಸೂಚಕವಾಗಿ ವಿಶಾಲ ಅರ್ಥದಲ್ಲಿ ಬಳಕೆಯಾಗಬೇಕಾದ ಸಾಮಾಜಿಕರು ಅಥವಾ ಸಮಾಜದ ಬಂಧುಗಳು ಎಂಬ ವಾಕ್ಯವನ್ನು ಯಾವುದೋ ಒಂದು ಜಾತಿಗೆ ಸೀಮಿತವಾಗಿ ಬಿಂಬಿಸುವ ಪ್ರಯತ್ನಗಳು ಕಾಣುತ್ತಿವೆ. ಆ ಮೂಲಕ ಯಾವುದೇ ತಾರತಮ್ಯವಿರದ ಅವರ ಸರ್ವಶ್ರೇಷ್ಠ ಚಿಂತನೆಗಳಿಗೆ ಮಸಿ ಬಳಿಯುವಂತಾಗುತ್ತಿದೆ. ಮಹನೀಯರ ಜಯಂತ್ಯುತ್ಸವಗಳು ಅವರ ಆಚಾರ – ವಿಚಾರ, ಜೀವನ, ಸಾಧನೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಅರ್ಥಪೂರ್ಣ ವೇದಿಕೆಯಾಗಬೇಕೆ ಹೊರತು ಜಾತಿಯನ್ನು ಪೋಷಿಸುವ, ವೈಷಮ್ಯಕ್ಕೆ ಎಡೆಮಾಡಿಕೊಡುವ ಜಾತಿ ಕೇಂದ್ರಿತ
ಕಾರ್ಯಕ್ರಮವಾಗಬಾರದು. ಕಡಿಮೆ ಸಂಖ್ಯೆಯಲ್ಲಿರುವ ತಳ ಸಮುದಾಯದವರ ಆಸೆ, ಆಶೋತ್ತರಗಳನ್ನು, ಅವರ ಆತಂಕ, ತಲ್ಲಣಗಳನ್ನು ಗಮನದಲ್ಲಿರಿಸಿಕೊಂಡು ಜಯಂತಿಯನ್ನು ಆಚರಿಸುವಂತಾದರೆ ಮಹನೀಯರ ಜಯಂತಿ ಕಾರ್ಯಕ್ರಮಗಳು ಸಾರ್ಥಕತೆ ಪಡೆದುಕೊಳ್ಳುತ್ತವೆ. ಈ ಬಗ್ಗೆ ಎಲ್ಲರೂ ಆಲೋಚಿಸಿ ಹೆಜ್ಜೆಯಿಡಬೇಕಿದೆ.

– ಕೊತ್ತಲವಾಡಿ ಶಿವಕುಮಾರ್, ಚಾಮರಾಜನಗರ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

4 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

4 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

4 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

4 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

4 hours ago