Mysore
29
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಓದುಗರ ಪತ್ರ: ಚಾಮುಂಡೇಶ್ವರಿ ದರ್ಶನ ವಿಶೇಷ ಪ್ಯಾಕೇಜ್ ದರ ಇಳಿಸಿ

ಓದುಗರ ಪತ್ರ

ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಗರ ಅನಿಸಿಕೊಂಡಿರುವ ಮೈಸೂರಿನಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ದೇವಾಲಯಗಳು, ವನ್ಯ ಸಂಪತ್ತು, ಹಲವು ಜಲಾಶಯಗಳು ಮುಕುಟಪ್ರಾಯದಂತಿವೆ. ಇವುಗಳಲ್ಲಿ ಪ್ರಮುಖವಾಗಿ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಷಾಢ ವಿಶೇಷ ಪೂಜೆಗಳು ಇನ್ನೇನು ಆರಂಭವಾಗಲಿವೆ. ಇದಕ್ಕಾಗಿ ರಾಜ್ಯ ಸರ್ಕಾರ ಚಾಮುಂಡೇಶ್ವರಿ ದೇವಾಲಯದಲ್ಲಿ ಜೂನ್ ೪,೧೧ ಹಾಗೂ ೧೮ ರಂದು ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಿದೆ. ಜೂನ್ ೧೭ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ನಡೆಯಲಿದ್ದು ಶ್ರೀಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ,ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸರ್ವ ಸಿದ್ಧತೆ ಮಾಡಲಾಗಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ದೇವಿಯ ನೇರ ದರ್ಶನ ಪಡೆಯಲು ೨,೦೦೦ ರೂ. ವಿಶೇಷ ಪ್ಯಾಕೇಜ್ ನಿಗದಿ ಮಾಡಲಾಗಿದೆ. ಇದು ಸಾಮಾನ್ಯ ಜನರಿಗೆ ಹೊರೆಯಾಗುತ್ತದೆ. ಆದ್ದರಿಂದ ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದವರು ನಿಗದಿಗೊಳಿಸಿರುವ ೨,೦೦೦ ರೂಗಳ ಪ್ಯಾಕೇಜ್ ದರವನ್ನು ಕಡಿಮೆ ಮಾಡಿದರೆ ಸಾಮಾನ್ಯ ವರ್ಗದ ಜನರಿಗೆ ಅನು ಕೂಲವಾಗುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು

Tags:
error: Content is protected !!